ಬೆಂಗಳೂರು: ಹಾಲಿನ ದರ 2 ರೂ ಹೆಚ್ಚಳ ಮಾಡಿರುವುದನ್ನು ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದು, ಅಲ್ಲದೇ ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು ಎಂದು ಹೇಳಿಕೆ ನೀಡಿದ್ದಾರೆ.
ಹಾಲಿನ ದರ ಏರಿಕೆಗೆ ಬಿಜೆಪಿ ಮತ್ತು ರಾಜ್ಯದ ಜನತೆ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿಯವರು ರೈತ ವಿರೋಧಿಗಳು. ಜಾಸ್ತಿಯಾಗಿರುವ 2ರೂ ರೈತರಿಗೆ ತಲುಪುತ್ತೆ. ರೈತರಿಗೆ ಹಣ ತಲುಪೋಲ್ಲ ಅನ್ನೋದನ್ನು ಯಾರು ಹೇಳಿದ್ರು ಎಂದು ಪ್ರಶ್ನೆ ಮಾಡಿದ ಅವರು, ಕೆಎಂಎಫ್ ಉಳಿದರೆ ರೈತರು ಉಳಿದಂತೆ ಎಂದಿದ್ದಾರೆ.
ರೈತರು ಸಾಲದಿಂದ ಎಲ್ಲಾ ಹಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಬಿಜೆಪಿಯವರ ರೈತ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ. ಬೇರೆ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ನೋಡಲಿ. ಆ ಮೇಲೆ ದರ ಏರಿಕೆ ಬಗ್ಗೆ ಮಾತನಾಡಲಿ ಎಂದು ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು. ಕೆಎಂಎಫ್ ಎಂದರೆ ರೈತರ ಒಕ್ಕೂಟ. ನನ್ನ ಪ್ರಕಾರ ಇನ್ನೂ ಹಾಲಿನ ದರ ಜಾಸ್ತಿ ಮಾಡಬೇಕು. ಯಾರೂ ಏನು ಬೇಕಾದರೂ ಟೀಕೆ ಮಾಡಿಕೊಳ್ಳಲಿ ಎಂದು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟರು.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…