ರಾಜ್ಯ

ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ: ಸಚಿವ ಕೆ.ವೆಂಕಟೇಶ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜೂನ್‍ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‍ನಲ್ಲಿ ಲೀಟರ್‍ಗೆ 4ರೂ. ಹಾಲಿನ ದರ ಹೆಚ್ಚಳ ಮಾಡಿದ್ದು, ಅದನ್ನು ಹಾಲಿನ ಉತ್ಪಾದಕರಿಗೆ ನೀಡಲಾಗುತ್ತಿದೆ. 65 ಲಕ್ಷ ಲೀಟರ್ ಹಾಲು ರಾಜ್ಯ, ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಮಾರಾಟವಾಗುತ್ತದೆ. ಉಳಿದ ಹಾಲನ್ನು ಹಾಲಿನ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ ಎಂದು ಹೇಳಿದರು.

ಇದನ್ನು ಓದಿ: ಕೆಎಂಎಫ್‌ನಿಂದ ಮತ್ತೊಂದು ಮೈಲಿಗಲ್ಲು:‌ ಏನದು ಗೊತ್ತಾ?

ಲೀಟರ್ ಹಾಲಿನ ದರವನ್ನು 10 ರೂ. ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ಗ್ರಾಹಕರ ಹಿತ ಗಮನದಲ್ಲಿಟ್ಟುಕೊಂಡು 4 ರೂ. ಹೆಚ್ಚಳ ಮಾಡಲಾಗಿದೆ. ಜೂನ್ ಅಂತ್ಯದವರೆಗೆ ಪ್ರತಿ ಲೀಟರ್‍ಗೆ 5ರೂ. ನೀಡುವ ಹಾಲಿನ ಪ್ರೋತ್ಸಾಹಧನವನ್ನು ರೈತರಿಗೆ ನೀಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ನೀಡಬೇಕಿದ್ದು, ಸರ್ಕಾರದಿಂದ ಬಿಡುಗಡೆಯಾದ ತಕ್ಷಣ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರೈತರಿಗೆ ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ನೀಡಲು ಒಕ್ಕೂಟಗಳಿಗೆ ನಿರ್ದೇಶಿಸಲಾಗಿದೆ. ಹಾಲಿನ ದರ ಹೆಚ್ಚಳವಾದ ನಂತರ ನಿತ್ಯ 20 ಲಕ್ಷ ಲೀಟರ್‍ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದೆ. ರೈತರು ಹಾಗೂ ಗ್ರಾಹಕರ ಸ್ನೇಹಿಯಾಗಿ ಕೆಎಂಎಫ್ ಕಾರ್ಯನಿರ್ವಹಿಸುತ್ತಿದ್ದು, ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಶೇ.3ರಿಂದ ಶೇ.4ರಷ್ಟು ಲಾಭಾಂಶ ಇಟ್ಟುಕೊಂಡಿದೆ. ನಂದಿನಿ ಉತ್ಪನ್ನಗಳ ಮಾರಾಟಗಾರರ ಮಾರ್ಜಿನ್‍ ಅನ್ನು ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

4 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

4 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

5 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

6 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

7 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

8 hours ago