ಬೆಂಗಳೂರು: ರಾಜ್ಯದಲ್ಲಿ ಜೂನ್ನಿಂದ ಪ್ರತಿದಿನ ಒಂದು ಕೋಟಿ ಲೀಟರ್ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ನಲ್ಲಿ ಲೀಟರ್ಗೆ 4ರೂ. ಹಾಲಿನ ದರ ಹೆಚ್ಚಳ ಮಾಡಿದ್ದು, ಅದನ್ನು ಹಾಲಿನ ಉತ್ಪಾದಕರಿಗೆ ನೀಡಲಾಗುತ್ತಿದೆ. 65 ಲಕ್ಷ ಲೀಟರ್ ಹಾಲು ರಾಜ್ಯ, ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಮಾರಾಟವಾಗುತ್ತದೆ. ಉಳಿದ ಹಾಲನ್ನು ಹಾಲಿನ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ ಎಂದು ಹೇಳಿದರು.
ಇದನ್ನು ಓದಿ: ಕೆಎಂಎಫ್ನಿಂದ ಮತ್ತೊಂದು ಮೈಲಿಗಲ್ಲು: ಏನದು ಗೊತ್ತಾ?
ಲೀಟರ್ ಹಾಲಿನ ದರವನ್ನು 10 ರೂ. ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ಗ್ರಾಹಕರ ಹಿತ ಗಮನದಲ್ಲಿಟ್ಟುಕೊಂಡು 4 ರೂ. ಹೆಚ್ಚಳ ಮಾಡಲಾಗಿದೆ. ಜೂನ್ ಅಂತ್ಯದವರೆಗೆ ಪ್ರತಿ ಲೀಟರ್ಗೆ 5ರೂ. ನೀಡುವ ಹಾಲಿನ ಪ್ರೋತ್ಸಾಹಧನವನ್ನು ರೈತರಿಗೆ ನೀಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ನೀಡಬೇಕಿದ್ದು, ಸರ್ಕಾರದಿಂದ ಬಿಡುಗಡೆಯಾದ ತಕ್ಷಣ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ರೈತರಿಗೆ ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ನೀಡಲು ಒಕ್ಕೂಟಗಳಿಗೆ ನಿರ್ದೇಶಿಸಲಾಗಿದೆ. ಹಾಲಿನ ದರ ಹೆಚ್ಚಳವಾದ ನಂತರ ನಿತ್ಯ 20 ಲಕ್ಷ ಲೀಟರ್ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದೆ. ರೈತರು ಹಾಗೂ ಗ್ರಾಹಕರ ಸ್ನೇಹಿಯಾಗಿ ಕೆಎಂಎಫ್ ಕಾರ್ಯನಿರ್ವಹಿಸುತ್ತಿದ್ದು, ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಶೇ.3ರಿಂದ ಶೇ.4ರಷ್ಟು ಲಾಭಾಂಶ ಇಟ್ಟುಕೊಂಡಿದೆ. ನಂದಿನಿ ಉತ್ಪನ್ನಗಳ ಮಾರಾಟಗಾರರ ಮಾರ್ಜಿನ್ ಅನ್ನು ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…
ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…
ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…