ರಾಜ್ಯ

ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ: ಸಚಿವ ಕೆ.ವೆಂಕಟೇಶ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜೂನ್‍ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‍ನಲ್ಲಿ ಲೀಟರ್‍ಗೆ 4ರೂ. ಹಾಲಿನ ದರ ಹೆಚ್ಚಳ ಮಾಡಿದ್ದು, ಅದನ್ನು ಹಾಲಿನ ಉತ್ಪಾದಕರಿಗೆ ನೀಡಲಾಗುತ್ತಿದೆ. 65 ಲಕ್ಷ ಲೀಟರ್ ಹಾಲು ರಾಜ್ಯ, ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಮಾರಾಟವಾಗುತ್ತದೆ. ಉಳಿದ ಹಾಲನ್ನು ಹಾಲಿನ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ ಎಂದು ಹೇಳಿದರು.

ಇದನ್ನು ಓದಿ: ಕೆಎಂಎಫ್‌ನಿಂದ ಮತ್ತೊಂದು ಮೈಲಿಗಲ್ಲು:‌ ಏನದು ಗೊತ್ತಾ?

ಲೀಟರ್ ಹಾಲಿನ ದರವನ್ನು 10 ರೂ. ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ಗ್ರಾಹಕರ ಹಿತ ಗಮನದಲ್ಲಿಟ್ಟುಕೊಂಡು 4 ರೂ. ಹೆಚ್ಚಳ ಮಾಡಲಾಗಿದೆ. ಜೂನ್ ಅಂತ್ಯದವರೆಗೆ ಪ್ರತಿ ಲೀಟರ್‍ಗೆ 5ರೂ. ನೀಡುವ ಹಾಲಿನ ಪ್ರೋತ್ಸಾಹಧನವನ್ನು ರೈತರಿಗೆ ನೀಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ನೀಡಬೇಕಿದ್ದು, ಸರ್ಕಾರದಿಂದ ಬಿಡುಗಡೆಯಾದ ತಕ್ಷಣ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರೈತರಿಗೆ ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ನೀಡಲು ಒಕ್ಕೂಟಗಳಿಗೆ ನಿರ್ದೇಶಿಸಲಾಗಿದೆ. ಹಾಲಿನ ದರ ಹೆಚ್ಚಳವಾದ ನಂತರ ನಿತ್ಯ 20 ಲಕ್ಷ ಲೀಟರ್‍ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದೆ. ರೈತರು ಹಾಗೂ ಗ್ರಾಹಕರ ಸ್ನೇಹಿಯಾಗಿ ಕೆಎಂಎಫ್ ಕಾರ್ಯನಿರ್ವಹಿಸುತ್ತಿದ್ದು, ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಶೇ.3ರಿಂದ ಶೇ.4ರಷ್ಟು ಲಾಭಾಂಶ ಇಟ್ಟುಕೊಂಡಿದೆ. ನಂದಿನಿ ಉತ್ಪನ್ನಗಳ ಮಾರಾಟಗಾರರ ಮಾರ್ಜಿನ್‍ ಅನ್ನು ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

1 hour ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago