ರಾಜ್ಯ

ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ: ಸಚಿವ ಕೆ.ವೆಂಕಟೇಶ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜೂನ್‍ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‍ನಲ್ಲಿ ಲೀಟರ್‍ಗೆ 4ರೂ. ಹಾಲಿನ ದರ ಹೆಚ್ಚಳ ಮಾಡಿದ್ದು, ಅದನ್ನು ಹಾಲಿನ ಉತ್ಪಾದಕರಿಗೆ ನೀಡಲಾಗುತ್ತಿದೆ. 65 ಲಕ್ಷ ಲೀಟರ್ ಹಾಲು ರಾಜ್ಯ, ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಮಾರಾಟವಾಗುತ್ತದೆ. ಉಳಿದ ಹಾಲನ್ನು ಹಾಲಿನ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ ಎಂದು ಹೇಳಿದರು.

ಇದನ್ನು ಓದಿ: ಕೆಎಂಎಫ್‌ನಿಂದ ಮತ್ತೊಂದು ಮೈಲಿಗಲ್ಲು:‌ ಏನದು ಗೊತ್ತಾ?

ಲೀಟರ್ ಹಾಲಿನ ದರವನ್ನು 10 ರೂ. ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ಗ್ರಾಹಕರ ಹಿತ ಗಮನದಲ್ಲಿಟ್ಟುಕೊಂಡು 4 ರೂ. ಹೆಚ್ಚಳ ಮಾಡಲಾಗಿದೆ. ಜೂನ್ ಅಂತ್ಯದವರೆಗೆ ಪ್ರತಿ ಲೀಟರ್‍ಗೆ 5ರೂ. ನೀಡುವ ಹಾಲಿನ ಪ್ರೋತ್ಸಾಹಧನವನ್ನು ರೈತರಿಗೆ ನೀಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ನೀಡಬೇಕಿದ್ದು, ಸರ್ಕಾರದಿಂದ ಬಿಡುಗಡೆಯಾದ ತಕ್ಷಣ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರೈತರಿಗೆ ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ನೀಡಲು ಒಕ್ಕೂಟಗಳಿಗೆ ನಿರ್ದೇಶಿಸಲಾಗಿದೆ. ಹಾಲಿನ ದರ ಹೆಚ್ಚಳವಾದ ನಂತರ ನಿತ್ಯ 20 ಲಕ್ಷ ಲೀಟರ್‍ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದೆ. ರೈತರು ಹಾಗೂ ಗ್ರಾಹಕರ ಸ್ನೇಹಿಯಾಗಿ ಕೆಎಂಎಫ್ ಕಾರ್ಯನಿರ್ವಹಿಸುತ್ತಿದ್ದು, ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಶೇ.3ರಿಂದ ಶೇ.4ರಷ್ಟು ಲಾಭಾಂಶ ಇಟ್ಟುಕೊಂಡಿದೆ. ನಂದಿನಿ ಉತ್ಪನ್ನಗಳ ಮಾರಾಟಗಾರರ ಮಾರ್ಜಿನ್‍ ಅನ್ನು ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

11 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

11 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

13 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

14 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

17 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

17 hours ago