ರಾಜ್ಯ

ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ.

ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದ ಪರಿಣಾಮ ಚಳಿ ಹೆಚ್ಚಾಗಿದ್ದರೂ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿತ್ತು. ಆದರೆ ಕಳೆದೆರಡು ದಿನದಿಂದ ಹಗಲು ವೇಳೆ ಬಿಸಿಲು ಹೆಚ್ಚಾಗಿದ್ದು, ರಾತ್ರಿ ವೇಳೆ ಚಳಿ ಅಧಿಕವಾಗಿದೆ. ಅಲ್ಲದೆ ಸಂಜೆ ಹಾಗೂ ಬೆಳಗಿನ ಜಾವ ಹೆಚ್ಚಿನ ಪ್ರಮಾಣದ ಇಬ್ಬನಿಯು ಬೀಳುತ್ತಿದೆ.

ಕೆಲವು ಕಡೆಗಳಲ್ಲಿ ಬೆಳಗ್ಗೆ ಮಂಜು ಮುಸುಕಿದ ವಾತಾವರಣ ಮುಂದುವರೆದಿದೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ 15 ಡಿಗ್ರಿ ಸೆಲ್ಸಿಯಸ್‌‍ಗಿಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ.

ಅದರಲ್ಲೂ ವಿಶೇಷವಾಗಿ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿತ ಕಂಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಚಿಕ್ಕಬಳ್ಳಾಪುರದಲ್ಲಿ 8.8 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ 9.6 ಡಿ.ಸೆ, ಚಿಕ್ಕಮಗಳೂರು 9.7 ಡಿ.ಸೆ, ತುಮಕೂರು 10.2 ಡಿ.ಸೆ, ಬೆಂಗಳೂರು ನಗರ , ಬೀದರ್‌ 10.7 ಡಿ.ಸೆ, ಮೈಸೂರು 10.9 ಡಿ.ಸೆ, ಬೆಂಗಳೂರು ದಕ್ಷಿಣ, ಹಾಸನ 11.1 ಡಿ.ಸೆ. ಶಿವಮೊಗ್ಗ 11.2 ಡಿ.ಸೆ, ಚಾಮರಾಜನಗರ 11.4 ಡಿ.ಸೆ., ಮಂಡ್ಯ 11.7 ಡಿ.ಸೆ.ಯಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ದಾವಣಗೆರೆ, ವಿಜಯನಗರ, ಗದಗ, ಹಾವೇರಿ, ಕಲಬುರಗಿ, ಚಿತ್ರದುರ್ಗ ಜಿಲ್ಲೆಗಳಲ್ಲಿ 12ರಿಂದ 13 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದ್ದರೆ, ರಾಯಚೂರು, ಉತ್ತರಕನ್ನಡ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ 14ರಿಂದ 15 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಡಿಸೆಂಬರ್‌ ತಿಂಗಳಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನ ವಾಡಿಕೆಗಿಂತ ಕಡಿಮೆಯಾಗಿ ತೀವ್ರ ಸ್ವರೂಪದ ಚಳಿ ಉಂಟಾಗಿತ್ತು. ಈಗ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚಾಗ ತೊಡಗಿದೆ. ಹೆಚ್ಚು ಕಡಿಮೆ ಇನ್ನು ಒಂದು ವಾರ ಕಾಲ ಇದೇ ಪರಿಸ್ಥಿತಿ ಮುಂದುವರೆಯುವ ಮುನ್ಸೂಚನೆಗಳಿವೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

42 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

55 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

1 hour ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

21 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

22 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

22 hours ago