ರಾಜ್ಯ

ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ.

ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದ ಪರಿಣಾಮ ಚಳಿ ಹೆಚ್ಚಾಗಿದ್ದರೂ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿತ್ತು. ಆದರೆ ಕಳೆದೆರಡು ದಿನದಿಂದ ಹಗಲು ವೇಳೆ ಬಿಸಿಲು ಹೆಚ್ಚಾಗಿದ್ದು, ರಾತ್ರಿ ವೇಳೆ ಚಳಿ ಅಧಿಕವಾಗಿದೆ. ಅಲ್ಲದೆ ಸಂಜೆ ಹಾಗೂ ಬೆಳಗಿನ ಜಾವ ಹೆಚ್ಚಿನ ಪ್ರಮಾಣದ ಇಬ್ಬನಿಯು ಬೀಳುತ್ತಿದೆ.

ಕೆಲವು ಕಡೆಗಳಲ್ಲಿ ಬೆಳಗ್ಗೆ ಮಂಜು ಮುಸುಕಿದ ವಾತಾವರಣ ಮುಂದುವರೆದಿದೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ 15 ಡಿಗ್ರಿ ಸೆಲ್ಸಿಯಸ್‌‍ಗಿಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ.

ಅದರಲ್ಲೂ ವಿಶೇಷವಾಗಿ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿತ ಕಂಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಚಿಕ್ಕಬಳ್ಳಾಪುರದಲ್ಲಿ 8.8 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ 9.6 ಡಿ.ಸೆ, ಚಿಕ್ಕಮಗಳೂರು 9.7 ಡಿ.ಸೆ, ತುಮಕೂರು 10.2 ಡಿ.ಸೆ, ಬೆಂಗಳೂರು ನಗರ , ಬೀದರ್‌ 10.7 ಡಿ.ಸೆ, ಮೈಸೂರು 10.9 ಡಿ.ಸೆ, ಬೆಂಗಳೂರು ದಕ್ಷಿಣ, ಹಾಸನ 11.1 ಡಿ.ಸೆ. ಶಿವಮೊಗ್ಗ 11.2 ಡಿ.ಸೆ, ಚಾಮರಾಜನಗರ 11.4 ಡಿ.ಸೆ., ಮಂಡ್ಯ 11.7 ಡಿ.ಸೆ.ಯಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ದಾವಣಗೆರೆ, ವಿಜಯನಗರ, ಗದಗ, ಹಾವೇರಿ, ಕಲಬುರಗಿ, ಚಿತ್ರದುರ್ಗ ಜಿಲ್ಲೆಗಳಲ್ಲಿ 12ರಿಂದ 13 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದ್ದರೆ, ರಾಯಚೂರು, ಉತ್ತರಕನ್ನಡ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ 14ರಿಂದ 15 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಡಿಸೆಂಬರ್‌ ತಿಂಗಳಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನ ವಾಡಿಕೆಗಿಂತ ಕಡಿಮೆಯಾಗಿ ತೀವ್ರ ಸ್ವರೂಪದ ಚಳಿ ಉಂಟಾಗಿತ್ತು. ಈಗ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚಾಗ ತೊಡಗಿದೆ. ಹೆಚ್ಚು ಕಡಿಮೆ ಇನ್ನು ಒಂದು ವಾರ ಕಾಲ ಇದೇ ಪರಿಸ್ಥಿತಿ ಮುಂದುವರೆಯುವ ಮುನ್ಸೂಚನೆಗಳಿವೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

1 hour ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

3 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago