ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ನಿಯಮ 73ರಡಿ ಡಾ. ಭರತ್ ಶೆಟ್ಟಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, 2022ರ ಡಿಸೆಂಬರ್ 16ರಂದು ಉಪಯೋಗಿ ಸಂಸ್ಥೆ ಉನ್ನತಾಧಿಕಾರ ಸಮಿತಿಯ ಶಿಫಾರಸು ಮತ್ತು ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬ ಷರತ್ತುಗಿ ಒಳಪಟ್ಟು ದೇವದರಿಯಲ್ಲಿ ಗಣಿಗಾರಿಕೆ ನಡೆಸಲು ಅನುಮೋದನೆ ನೀಡಲಾಗಿದೆ.
ಈ ಹಿಂದೆ ಕೆಐಓಸಿಎಲ್ ರಾಜ್ಯದಲ್ಲಿ ಗಣಿಗಾರಿಕೆ ನಡೆಸುವಾಗ ಹಲವು ನಿಯಮಗಳ ಉಲ್ಲಂಘನೆ ಮಾಡಿದ್ದು, ನೋಟಿಸ್ ನೀಡಲಾಗಿದೆ. ಲಕ್ಯಾ ಅಣೆಕಟ್ಟೆ ಎತ್ತರಿಸಿ 340 ಹೆಕ್ಟೇರ್ ಅರಣ್ಯಕ್ಕೆ ಹಾನಿ ಮಾಡಿದ್ದಾರೆ ಎಂದು ಹೇಳಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನದೊಳಗೆ ಕೊಳವೆ ಮಾರ್ಗ ಅಳವಡಿಸುವುದೂ ಸೇರಿ 465.73ಹೆಕ್ಟೇರ್ ಪ್ರದೇಶದಲ್ಲಿ ಅನುಮತಿ ಇಲ್ಲದೆ ಅರಣ್ಯೇತರ ಉದ್ದೇಶಕ್ಕೆ ಬಳಕೆ ಮಾಡಿದ್ದಾರೆ. ಈ ಪರಿಸರ ಹಾನಿಗೆ 142 ಕೋಟಿ ರೂ. ಕಟ್ಟಬೇಕಿದೆ. ಇದರ ಜೊತೆಗೆ ಎನ್.ಪಿ.ವಿ. ಶುಲ್ಕ 628 ಕೋಟಿ ರೂ. ಹಾಗೂ ಬಡ್ಡಿ ಸೇರಿ ಒಟ್ಟಾರೆ 3000 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರಕ್ಕೆ ಕೊಡಬೇಕಾಗಿದೆ. ಈ ಎಲ್ಲ ನಿಬಂಧನೆಯನ್ನು ಸಂರ್ಪೂಣವಾಗಿ ಅನುಪಾಲನೆ ಮಾಡಿದಲ್ಲಿ, ಸದರಿ ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ಹಸ್ತಾಂತರ ಮಾಡುವ ಬಗ್ಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…