ಬೆಂಗಳೂರು : ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದರುವ ಗೃಹ ಸಚಿವ ಆರಗ ಜ್ಞಾನೇಂದ್ರ ಮೀಡಿಯಾದಲ್ಲಿ ನೋಡಿದ್ದೇನೆ, ಅದು ನೊಡಬಾರದ ದೃಶ್ಯ. ಅತ್ಯಂತ ಕ್ರೂರ ಹಾಗೂ ಅಮಾನವೀಯವಾಗಿ ಅವರು ಎನ್ ಮಾಡ್ಲಿಕೆ ಸಾಧ್ಯ ಅಂತ ತೋರ್ಸಿದ್ದಾರೆ. ಅವರು ಮನುಷ್ಯರು ಹೌದೋ ಅಲ್ವೋ ಎಂಬ ಅನುಮಾನ ಶುರುವಾಗಿದೆ. ಈ ರೀತಿಯ ರಾಕ್ಷಸಿ ಪೈಶಾಚಿಕ ಕೃತ್ಯ ಮಾಡುವಂತವರಿಗೆ ಶಿಕ್ಷ ಕೊಡಿಸುವ ಬಗ್ಗೆ ಯೋಚನೆ ಮಾಡಬೇಕು. ಎಲ್ಲಾ ವರ್ಗದವರು ಈ ತಪ್ಪನ್ನು ಖಂಡಿಸಬೇಕು. ಕೇವಲ ಒಂದು ವರ್ಗದವರ ಪರ ನಿಲ್ಲೋದು, ಇನ್ನೊಂದು ವರ್ಗದ ವಿರುದ್ಧ ಮಾತಾಡೋದು ಅಪಾಯಕಾರಿ. ಈ ಕೊಲೆಯನ್ನು ಎಲ್ಲಾರೂ ಖಂಡಿಸಬೇಕು ಎಂದಿದ್ದಾರೆ.
ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಖಂಡಿತವಾಗಿ ಇದಕ್ಕೆ ಉತ್ತರ ಕೊಡಬೇಕು. ಹಂತಕರು ಅದೇ ರಾಜ್ಯದಲ್ಲಿ ಬೆಳೆದಿದ್ದಾರೆ. ಆ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸರ್ಕಾರ ವಿಫಲವಾಗಿದೆ. ಖಂಡಿತವಾಗಿ ಇಡೀ ಜನ ಸಮುದಾಯ ಎದ್ದು ಖಂಡಿಸಬೇಕು. ಆಗ ಇಂತಹ ದ್ರೋಹಿಗಳು ತಲೆ ಎತ್ತಲ್ಲ. ಖಡಿವಾಣ ಆಗುತ್ತೆ. ಇದು ಅತ್ಯಂತ ದುರದೃಷ್ಟಕರ ಸಂಗತಿ, ಮತಾಂಧ ಶಕ್ತಿಗಳು ಧರ್ಮ ಅಂದರೆ ಕೊಲೆ, ಧರ್ಮ ಅಂದ್ರೆ ರಕ್ತಪಾತ ಈ ರೀತಿಯ ತಿಳುವಳಿಕೆಯಿಂದ ಇಡೀ ಜಗತ್ತಿನಲ್ಲಿ ಅವರು ಸುಖವಾಗಿಲ್ಲ ಜಗತ್ತಿನಲ್ಲಿಯೂ ಯಾರಿಗೂ ಸುಖವಾಗಿ ಶಾಂತಿಯಿಂದ ಇರಲು ಬಿಡುತ್ತಿಲ್ಲ. ಎಲ್ಲಾಕಡೆ ಈ ಕೃತ್ಯ ನಡೆಯುತ್ತಿದೆ. ಈ ಮತಾಂಧ ಶಕ್ತಿಗಳು ತಲೆ ಎತ್ತದಂತೆ ಎಲ್ಲಾ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಆರೋಪಿಗಳನ್ನು ಎನ್ ಕೌಂಟರ್ ಮಾಡಿ ಎಂಬ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಆರಗ ಜ್ಞಾನೇಂದ್ರ ಅವರು, ಮುತಾಲಿಕ್ ಏನ್ ಹೇಳ್ತಾರೆ ಎಂಬುವುದು ಮುಖ್ಯ ಅಲ್ಲ. ದೇಶದಲ್ಲಿ ಸಂವಿಧಾನ ಕಾನೂನು ಶಿಕ್ಷೆ ಎಲ್ಲವೂ ಇದೆ. ಕೊಲೆ ಮಾಡಿದವರು ಈ ಸಂವಿಧಾನ ,ಕಾನೂನಿಂದ ಲಾಭ ಇಲ್ಲ ಅಂತ ತಿಳಿದುಕೊಂಡವರು. ನಾವೇ ಶಿಕ್ಷೆ ಕೊಡುವವರು ಅಂತಾನೇ ಹೀಗೆ ಮಾಡಿದ್ದು, ಕಾನೂನು ಚೌಕಟ್ಟಿನಲ್ಲಿ ಏನ್ ಮಾಡಬೇಕೋ ಅದನ್ನು ಮಾಡ್ತೀವಿ. ನಮಗೂ ಸಿಟ್ಟು ಬರುತ್ತೆ, ನೋವು ಆಗುತ್ತೆ. ಜಂಗಲ್ ರಾಜ್ಯ ಅಲ್ಲ ಇದು. ಇಂತಹ ಮತಾಂಧ ಶಕ್ತಿಗಳಿಗೆ ಮೆಸೇಜ್ ಕೊಡಬೇಕು. ಇದು ಮಾತನಾಡಲಾರದಂತ ದೃಶ್ಯ, ಮೌನವಾಗಿ ಒಂದ್ ಕ್ಷಣ ಯೋಚನೆ ಮಾಡಬೇಕು. ಮಾತಿನಲ್ಲಿ ಘಟನೆ ಖಂಡಿಸಲು ಆಗಲ್ಲ ಎಂದು ಉತ್ತರಿಸಿದ್ದಾರೆ.
ಘಟನೆ ಖಂಡಿಸಿ ಸಿದ್ದರಾಮಯ್ಯ ಟ್ವೀಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿದ ಸಚಿವರು ಪಕ್ಷ ಬೇದ ಮರೆತು, ಮಾನವೀಯ ದೃಷ್ಟಿಯಿಂದ ಎಲ್ಲಾರೂ ಈ ಘಟನೆಯನ್ನು ಖಂಡಿಸಬೇಕಿದೆ ಎಂದಿದ್ದಾರೆ.