ರಾಜ್ಯ

ಶೀಘ್ರ 2.67 ಲಕ್ಷ ಮೆ.ಟನ್ ಯುರಿಯಾ ಪೂರೈಕೆಗೆ ಕೆಂದ್ರಕ್ಕೆ ಸಚಿವ ಚಲುವರಾಯಸ್ವಾಮಿ ಮನವಿ

ಬೆಂಗಳೂರು : ಕೇಂದ್ರವೇ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬಾರದೆ ಕರ್ನಾಟಕ ರಾಜ್ಯದಲ್ಲಿ ಯುರಿಯಾ ಕೊರತೆಯಾಗಿದ್ದು ಅತ್ಯಂತ ತ್ವರಿತವಾಗಿ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ ಮಾಡಿದರು.

ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚವ್ಹಾಣ್ ರವರು ಗುರುವಾರ ಮಧ್ಯಾಹ್ನ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಕರ್ನಾಟಕದಲ್ಲಿ ಸರಬರಾಜು ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸವಿವರವಾಗಿ ಗಮನ ಸೆಳೆದು ಶೀಘ್ರ ಬಾಕಿ ಪೂರೈಕೆಗೆ ಬೇಡಿಕೆ ಸಲ್ಲಿಸಿದರು.

ಕರ್ನಾಟಕ ವಿಧಾನಸಭೆ ಹಾಗೂ ವಿಧಾನಪರಿಷತ್ತು ಕಲಾಪಗಳಲ್ಲಿ ಎರಡು ದಿನ ರಸಗೊಬ್ಬರ ಕೊರತೆ ಬಗ್ಗೆ ನಡೆದ ಗಂಭೀರ ಚರ್ಚೆಗಳ ವಿಚಾರ ಹಾಗೂ ರಾಜ್ಯದ ಬೇಡಿಕೆ ಕೇಂದ್ರದ ಹಂಚಿಕೆ ಮತ್ತು ಪೂರೈಕೆ ಪ್ರಮಾಣದ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕರ್ನಾಟಕದಲ್ಲಿ ಖರೀಫ್ ವಿಕಸಿತ ಕೃಷಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿ ಜುಲೈ ತಿಂಗಳಿಗೆ 1.27 ಲಕ್ಷ ಟನ್ ಯೂರಿಯಾ ಮತ್ತು ಆಗಸ್ಟ್ ತಿಂಗಳಿಗೆ 1.40 ಲಕ್ಷ ಟನ್ ಯೂರಿಯಾ ಕೊರತೆಯಿದೆ. ಒಟ್ಟಾರೆಯಾಗಿ 2.67 ಲಕ್ಷ ಟನ್ ಯೂರಿಯಾವನ್ನು ಆದಷ್ಟು ಬೇಗ ಕರ್ನಾಟಕಕ್ಕೆ ವಿತರಿಸಲು ಅಗತ್ಯವಿದೆ ಎಂದು ಕೃಷಿ ಸಚಿವರು ವಿವರ ಒದಗಿಸಿದರು.

ಆಗಸ್ಟ್-ಸೆಪ್ಟೆಂಬರ್ ಮಾಹೆಯಲ್ಲಿ ಬಿತ್ತನೆ ಕಾರ್ಯ ಹೆಚ್ಚಿನ ಪ್ರಮಾಣದಲ್ಲಿ ನಡೆಯುವುದರಿಂದ ರೈತರಿಗೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರವನ್ನು ಪೂರೈಸಬೇಕಿದೆ. ವಿಳಂಭವಾದಲ್ಲಿ ರೈತರ ಬೆಳೆಗೆ ಹಾನಿಯಾಗುವ ಸಂಭವವಿರುತ್ತದೆ. ಬಹುತೇಕ ಬೆಳೆಗಳಿಗೆ ಮೇಲುಗೊಬ್ಬರವಾಗಿ ಯುರಿಯಾ ಬಳಸುವುದರಿಂದ ತುರ್ತಾಗಿ ಮನವಿ ಮಾಡಿದರು. ನಾವು ರಬಿ ಹಂಗಾಮಿನ ಗೊಬ್ಬರದ ಅವಶ್ಯಕತೆಗಳ ವಿವರ ಸಲ್ಲಿಸಿದ್ದು ಅದರಂತೆ ಹಂಚಿಕೆ ಮಾಡುವಂತೆಯೂ ಅವರು ವಿನಂತಿಸಿದರು.

ಇದೇ ವೇಳೆ ಇಂದೇ ತಾವು ರಸಗೊಬ್ಬರ ಇಲಾಖೆ ಕಾರ್ಯದರ್ಶಿಯವರೊಂದಿಗೆ ಮಾತನಾಡಿ ಆದಷ್ಟು ಬೇಗ ಕರ್ನಾಟಕಕ್ಕೆ ಬಾಕಿ ರಸಗೊಬ್ಬರ ಪೂರೈಕೆಯ ವ್ಯವಸ್ಥೆ ಮಾಡುವುದಾಗಿ ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚವ್ಹಾಣ್ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಉತ್ತರಪ್ರದೇಶ ರಾಜ್ಯ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಶಾಹಿ ಅವರು ಮಾತನಾಡಿ ರಾಜ್ಯಕ್ಕೆ 18 ಲಕ್ಷ ಮೆ.ಟನ್ ಯುರಿಯಾ ಹಂಚಿಕೆ ಮಾಡಲಾಗಿದ್ದು ಈ ವರೆಗೆ ಕೇವಲ 12 ಲಕ್ಷ ಮೆ.ಟನ್ ಪೂರೈಕೆಯಾಗಿದೆ. ಇನ್ನು 6 ಲಕ್ಷ ಮೆ.ಟನ್ ವ್ಯತ್ಯಾಸವಿದ್ದು ಸಮಸ್ಯೆ ತಲೆದೂರಿದೆ. ಆದಷ್ಟು ಬೇಗ ಬಾಕಿ ಪೂರೈಕೆ ಮಾಡುವಂತೆ ಮನವಿ ಮಾಡಿದರು.

ಬಿಹಾರ, ಉತ್ತರಖಾಂಡ, ಛತ್ತೀಸ್ಘಡ ಸೇರಿದಂತೆ ವಿವಿಧ ರಾಜ್ಯಗಳ ಕೃಷಿ ಸಚಿವರೂ ಸಹ ತಮ್ಮ ರಾಜ್ಯಗಳಲ್ಲಿ ಉಂಟಾಗಿರುವ ಯುರಿಯಾ ಮತ್ತು ಡಿ.ಎ.ಪಿ ರಸಗೊಬ್ಬರ ಕೊರತೆ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದರು.

ರಾಜ್ಯದಲ್ಲಿ ಯಶಸ್ವಿಯಾಗಿ ರಬಿ ವಿಕಸಿತ ಕೃಷಿ ಅಭಿಯಾನ ನಡೆಯುತ್ತಿದ್ದು ತಾವು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೆಪ್ಟೆಂಬರ್ 15 ಮತ್ತು 16 ರಂದು ನಡೆಯುವ ರಬಿ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ಎನ್.ಚಲುವರಾಯಸ್ವಾಮಿ ಕೇಂದ್ರ ಸಚಿವರಿಗೆ ತಿಳಿಸಿದರು.

ಈ ಶೈಕ್ಷಣಿಕ ವರ್ಷದಿಂದಾಗಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದ್ದು ಕೇಂದ್ರ ಐ.ಸಿ.ಎ.ಆರ್ ಮಾನ್ಯತೆಗೆ ಒಳಪಡಿಸಿ ಅಭಿವೃದ್ಧಿ ಅನುದಾನಗಳನ್ನು ಬಿಡುಗಡೆ ಮಾಡಿ, ಐಸಿಎಆರ್ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿ ಮತ್ತು ಯುಎಎಸ್ ಬೆಂಗಳೂರು ನಿಂದ ಎಲ್ಲಾ ಕೆವಿಕೆ ಮತ್ತು ಎಐಸಿಆರ್ಪಿ ಕೇಂದ್ರಗಳನ್ನು ವರ್ಗಾಯಿಸುವಂತೆ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

24 mins ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

31 mins ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

37 mins ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

43 mins ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

11 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

11 hours ago