Mysore
22
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಏರಿಕೆ : ಕೃಷಿ ಸಚಿವರಿಂದ ಗುಡ್‌ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಪೆಟ್ರೋಲ್‌ ಡಿಸೇಲ್‌ ಹಾಗೂ ಹಾಲಿನ ದರ ಏರಿಕೆ ಬೆನ್ನಲ್ಲೆ ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಕೂಡ ನಡೆಯುತ್ತಿವೆ.

ಈ ವಿಚಾರವಾಗಿ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಅಭಿವೃದ್ಧಿ ಕೆಲಸ ಆಗುವಾಗ ಬೆಲೆ ಏರಿಕೆ ಮಾಡುವುದು ಸಹಜ. ಇದರಿಂದ ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಹೇಳುವ ಮೂಲಕ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಸರ್ಕಾರ ಬಂದರೂ ಬೆಲೆ ಏರಿಕೆ ಆಗುತ್ತದೆ. ಸರ್ಕಾರ ತೆರಿಗೆ ಹಾಕದೆ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಅವೈಜ್ಞಾನಿಕವಾಗಿ ದರ ಏರಿಕೆ ಮಾಡಿದರೆ ತಪ್ಪು ಅಂತ ಪ್ರಶ್ನೆ ಮಾಡಬಹುದು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ಕೂಡ ಕೊಟ್ಟಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಒಂದು ಲೀಟರ್​ಗೆ ಹೆಚ್ಚುವರಿಯಾಗಿ 50 ಎಂಎಲ್​​ ಹಾಲು ನೀಡುತ್ತಿರುವುದರಿಂದ 2 ರೂ. ಹೆಚ್ಚಳ ಮಾಡಲಾಗಿದೆ. ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಹೇಳಿದರು.

ಇನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ಕಾಣಿಕೆ ನೀಡಲು ದರ ಏರಿಕೆ ಮಾಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡಿದಾಗ ಎಷ್ಟು ಕೊಟ್ಟಿದೆ..? ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್​ ಯಡಿಯೂರಪ್ಪ ಎಷ್ಟು ಕೊಟ್ಟಿದ್ದಾರೆ, ನಾವು ಬಿಜೆಪಿ ರೀತಿ ಮಾಡಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

 

Tags:
error: Content is protected !!