ರಾಜ್ಯ

ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಏರಿಕೆ : ಕೃಷಿ ಸಚಿವರಿಂದ ಗುಡ್‌ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಪೆಟ್ರೋಲ್‌ ಡಿಸೇಲ್‌ ಹಾಗೂ ಹಾಲಿನ ದರ ಏರಿಕೆ ಬೆನ್ನಲ್ಲೆ ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಕೂಡ ನಡೆಯುತ್ತಿವೆ.

ಈ ವಿಚಾರವಾಗಿ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಅಭಿವೃದ್ಧಿ ಕೆಲಸ ಆಗುವಾಗ ಬೆಲೆ ಏರಿಕೆ ಮಾಡುವುದು ಸಹಜ. ಇದರಿಂದ ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಹೇಳುವ ಮೂಲಕ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಸರ್ಕಾರ ಬಂದರೂ ಬೆಲೆ ಏರಿಕೆ ಆಗುತ್ತದೆ. ಸರ್ಕಾರ ತೆರಿಗೆ ಹಾಕದೆ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಅವೈಜ್ಞಾನಿಕವಾಗಿ ದರ ಏರಿಕೆ ಮಾಡಿದರೆ ತಪ್ಪು ಅಂತ ಪ್ರಶ್ನೆ ಮಾಡಬಹುದು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ಕೂಡ ಕೊಟ್ಟಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಒಂದು ಲೀಟರ್​ಗೆ ಹೆಚ್ಚುವರಿಯಾಗಿ 50 ಎಂಎಲ್​​ ಹಾಲು ನೀಡುತ್ತಿರುವುದರಿಂದ 2 ರೂ. ಹೆಚ್ಚಳ ಮಾಡಲಾಗಿದೆ. ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಹೇಳಿದರು.

ಇನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ಕಾಣಿಕೆ ನೀಡಲು ದರ ಏರಿಕೆ ಮಾಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡಿದಾಗ ಎಷ್ಟು ಕೊಟ್ಟಿದೆ..? ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್​ ಯಡಿಯೂರಪ್ಪ ಎಷ್ಟು ಕೊಟ್ಟಿದ್ದಾರೆ, ನಾವು ಬಿಜೆಪಿ ರೀತಿ ಮಾಡಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

3 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

3 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

5 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

7 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

9 hours ago