ಬೆಳಗಾವಿ : ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಹಾಗೂ ಹಾಲಿನ ದರ ಏರಿಕೆ ಬೆನ್ನಲ್ಲೆ ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಕೂಡ ನಡೆಯುತ್ತಿವೆ.
ಈ ವಿಚಾರವಾಗಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಅಭಿವೃದ್ಧಿ ಕೆಲಸ ಆಗುವಾಗ ಬೆಲೆ ಏರಿಕೆ ಮಾಡುವುದು ಸಹಜ. ಇದರಿಂದ ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಹೇಳುವ ಮೂಲಕ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಸರ್ಕಾರ ಬಂದರೂ ಬೆಲೆ ಏರಿಕೆ ಆಗುತ್ತದೆ. ಸರ್ಕಾರ ತೆರಿಗೆ ಹಾಕದೆ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಅವೈಜ್ಞಾನಿಕವಾಗಿ ದರ ಏರಿಕೆ ಮಾಡಿದರೆ ತಪ್ಪು ಅಂತ ಪ್ರಶ್ನೆ ಮಾಡಬಹುದು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ಕೂಡ ಕೊಟ್ಟಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಒಂದು ಲೀಟರ್ಗೆ ಹೆಚ್ಚುವರಿಯಾಗಿ 50 ಎಂಎಲ್ ಹಾಲು ನೀಡುತ್ತಿರುವುದರಿಂದ 2 ರೂ. ಹೆಚ್ಚಳ ಮಾಡಲಾಗಿದೆ. ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಹೇಳಿದರು.
ಇನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಾಣಿಕೆ ನೀಡಲು ದರ ಏರಿಕೆ ಮಾಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡಿದಾಗ ಎಷ್ಟು ಕೊಟ್ಟಿದೆ..? ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್ ಯಡಿಯೂರಪ್ಪ ಎಷ್ಟು ಕೊಟ್ಟಿದ್ದಾರೆ, ನಾವು ಬಿಜೆಪಿ ರೀತಿ ಮಾಡಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…