ಬೆಂಗಳೂರು: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ತಾಯಂದಿರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತದ ಘಟನೆ ನಡೆದು ಹೋಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ರೀತಿಯ ಸಮಸ್ಯೆಗಳ ಪರಿಹಾರಕ್ಕೆ ವಿರೋಧ ಪಕ್ಷಗಳ ಸಹಕಾರವು ಆಗತ್ಯ. ನಾನು ರಾಜೀನಾಮೆ ನೀಡುವುದರಿಂದ ಸಮಸ್ಯೆ ನಿವಾರಣೆಯಾಗುತ್ತದೆ ಎಂದರೆ ಅದಕ್ಕೂ ಸಿದ್ಧನಿದ್ದೇನೆ ಎಂದರು.
ನವೆಂಬರ್.9ರಂದು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ಗೆ ಒಳಗಾದ 7 ಮಂದಿ ಗರ್ಭಿಣಿಯರಿಗೆ ಲ್ಯಾಕ್ಟೇಟ್ ದ್ರಾವಣ ನೀಡಿ ಹೆರಿಗೆ ಮಾಡಿಸಲಾಗಿತ್ತು. ಇದರ ಪರಿಣಾಮದಿಂದ ನವೆಂಬರ್.10ರಂದು ಇಬ್ಬರು ಸಾವನ್ನಪ್ಪಿದ್ದರು. ಇದಾದ ಬಳಿಕ 5 ಮಂದಿ ಬಾಣಂತಿಯರನ್ನು ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅದಾದ ಮೂರು ದಿನ ಬಳಿಕ ಓರ್ವ ಬಾಣಂತಿ ಸಾವನ್ನಪ್ಪಿದ್ದು, ಗುರುವಾರವೂ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ.5ಕ್ಕೆ ಏರಿಕೆಯಾಗಿದೆ.
ಸರ್ಕಾರದಿಂದ ಮೃತ ತಾಯಂದಿರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯದಲ್ಲಿ ಹೆರಿಗೆಗೆ ಸಂಬಂಧಿಸಿದಂತೆ ಈ ವರ್ಷದ ಆರಂಭದಿಂದ ಇಲ್ಲಿಯವರೆಗೆ ಒಟ್ಟು 327 ಸಾವುಗಳು ಸಂಭವಿಸಿವೆ. ಎಲ್ಲ ಪ್ರಕರಣಗಳ ಬಗ್ಗೆ ಪರಿಶೀಲಿಸಲು ಸೂಚನೆ ನೀಡಿದ್ದೇವೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸೂಚನೆ ನೀಡಿದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…