ರಾಜ್ಯ

ಅನ್ಯಕೋಮಿನ ನಡುವ ದ್ವೇಷ ಹರಡುವವ ವಿರುದ್ಧ ಕಠಿಣ ಕ್ರಮ ; ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಮುಸ್ಲಿಂ ನಡುವೆ ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‍ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಕ್ತ ಎಚ್ಚರಿಕೆ ನೀಡಿದ್ದಾರೆ ಎಂದರು.‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸಭೆಗಳ ಮೂಲಕ ಸೌಹಾರ್ದತೆ, ಶಾಂತಿ ಪಾಲನೆಗೆ ಕ್ರಮ ಕೈಗೊಳ್ಳಲಾಗುವುದು. ಶೇ. 95 ರಷ್ಟು ಜನರಿಗೆ ಕೋಮುವಾದ, ಮಧ್ಯವಾದ ಬೇಕಿಲ್ಲ. ಕೆಲವೇ ಕೆಲವು ಶಕ್ತಿಗಳು ಕೋಮುಸಂಘರ್ಷದಲ್ಲಿ ತೊಡಗಿಸಿಕೊಂಡಿವೆ. ಅನಗತ್ಯವಾದ ಪ್ರಚೋದನೆ ನೀಡುತ್ತಿವೆ. ಅದನ್ನು ಮುಲಾಜಿಲ್ಲದೆ ಮಟ್ಟ ಹಾಕಲಾಗುವುದು. ಜನ ಬಯಸಿದಂತೆ ಶಾಂತಿ ಸುವ್ಯವಸ್ಥೆಯನ್ನು ಪಾಲನೆ ಮಾಡಲಾಗುವುದು ಎಂದು ಹೇಳಿದರು.

ಶಾಂತಿ ಸೌಹಾರ್ದತೆ, ಸಹಬಾಳ್ವೆ ಬಯಸುವವರು ಹಾಗೂ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಆಸಕ್ತಿ ಹೊಂದಿರುವವರು ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಧ್ವನಿಯೆತ್ತಬೇಕು. ಇಲ್ಲವಾದರೆ ವಿಛಿದ್ರಕಾರಿ ಶಕ್ತಿಗಳ ಧ್ವನಿಗಳೇ ಜೋರಾಗಿ ಅದೇ ಸತ್ಯ ಎಂಬಂತಾಗುತ್ತದೆ. ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಹಲವಾರು ರೀತಿ ಕ್ರಮ ಕೈಗೊಳ್ಳಲು ಸರ್ಕಾರ ಆಲೋಚಿಸಿದೆ. ಮುಂದಿನ ದಿನಗಳಲ್ಲಿ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹಿಂದೂ, ಮುಸ್ಲಿಂ ಎರಡೂ ಸಮುದಾಯಗಳಲ್ಲಿ ಕೆಲವು ಸಂಘಟನೆಗಳು ಪ್ರಚೋದನೆ ನೀಡುತ್ತಿವೆ. ಅಂತಹ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕೋಮು ಹಿಂಸೆ ನಿಗ್ರಹ ಪಡೆ ರಚಿಸಲಾಗುತ್ತದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ವಿಚಾರವಾಗಿ ಚರ್ಚೆ ಅನಗತ್ಯ. ಯಾರೋ ಒಂದಿಬ್ಬರು ಹೇಳಿಕೆ ನೀಡಿದಾಕ್ಷಣ ಅದನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಕೆಲವರು ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡಿರುವುದಕ್ಕೆ ಆದ್ಯತೆ ನೀಡುವುದಿಲ್ಲ ಎಂದರು.

ನಾನು ಜಿಲ್ಲಾ ಉಸ್ತುವಾರಿ ಬದಲಾವಣೆ ಬಗ್ಗೆ ಹೇಳಿಲ್ಲ. ಅದು ಯಾವ ಮೂಲದಿಂದ ಸುದ್ದಿ ಹುಟ್ಟಿಕೊಂಡಿದೆಯೋ ಗೊತ್ತಿಲ್ಲ. ಗೃಹಸಚಿವ ಪರಮೇಶ್ವರ್ ಈ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಮಂಗಳೂರಿನಲ್ಲಿ ಎಲ್ಲರೂ ನನ್ನೊಂದಿಗೆ ವಿಶ್ವಾಸದಿಂದಲೇ ಮಾತನಾಡಿದ್ದಾರೆ. ಉಸ್ತುವಾರಿ ಬಗ್ಗೆ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಒಂದಿಬ್ಬರ ಮಾತುಗಳಿಗೆ ಒತ್ತು ನೀಡಬೇಕಿಲ್ಲ. ದಕ್ಷಿಣ ಕನ್ನಡದ ಉಸ್ತುವಾರಿ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ. ಹೆಚ್ಚಿನ ಉತ್ಸಾಹದಿಂದಲೇ ಕೆಲಸ ಮಾಡುತ್ತಿದ್ದೇನೆ. ಮತ್ತಷ್ಟು ಪರಿಣಾಮಕಾರಿ ಕೆಲಸ ಮಾಡಲು ಮುಂದಾಗುತ್ತಿದ್ದೇನೆ ಎಂದರು.

ನಿನ್ನೆ ತಾವು ಮಂಗಳೂರಿಗೆ ಭೇಟಿ ನೀಡಿದ್ದು, ಕೊಲೆಯಾದ ರಹೀಂಖಾನ್ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದೇನೆ. ರಹೀಂ ಖಾನ್ ಗ್ರಾಮದಲ್ಲಿ ಎಲ್ಲರ ಜೊತೆಗೂ ಸೌಹಾರ್ದತೆಯಲ್ಲಿದ್ದ. ಆದರೂ ಆತನ ಹತ್ಯೆಯಾಗಿದೆ ಎಂದು ವಿಷಾದಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

31 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

33 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

36 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

39 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

44 mins ago