ಬನ್ನೇರುಘಟ್ಟ : ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟರು.
ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಜನರಿಗೆ ಅರಿವು ಮೂಡಿಸಬೇಕು ಎಂದರು.
ಅಲ್ಲದೆ ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಬೇಕು ಜೊತೆಗೆ ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಅವರನ್ನು ಪ್ರೇರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ ಮೃಗಾಲಯಕ್ಕೆ ಬರುವ ಸಂದರ್ಶಕರಿಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ಪೂರೈಸಬೇಕು ಎಂದು ಅರಣ್ಯ ಸಚಿವರು ಸೂಚನೆ ನೀಡಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…