ಬನ್ನೇರುಘಟ್ಟ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಗಣರಾಜ್ಯದ ದಿನ ಹುಟ್ಟಿದ ಗಂಡು ಆನೆ ಮರಿಗೆ ʻಸ್ವರಾಜ್ʼ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ನಾಮಕರಣ ಮಾಡಿದರು.
ಉದ್ಯಾನವನದಲ್ಲಿರುವ ವೇದಾ ಎಂಬ ಹೆಣ್ಣಾನೆ ಕಳೆದ ಜನವರಿ 26ರ ಗಣರಾಜ್ಯ ದಿನದಂದು ಗಂಡಾನೆ ಮರಿಗೆ ಜನ್ಮ ನೀಡಿತು. ಹೀಗಾಗಿ ಈ ಆನೆಗೆ ಫಲಕ ಅನಾವರಣ ಮಾಡಿ ‘ಸ್ವರಾಜ್’ ಎಂದು ಸಚಿವ ಈಶ್ವರ್ ಖಂಡ್ರೆ ಹೆಸರಿಟ್ಟರು.
ಆನೆ ಹಾಲುಣಿಸುವ ಕೇಂದ್ರದ ಉದ್ಘಾಟನೆ
ಇದೇ ಸಂದರ್ಭ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಒಟ್ಟು 26 ಆನೆಗಳಿದ್ದು, ಇಲ್ಲಿ ವರ್ಷಕ್ಕೆ 2 ರಿಂದ 3 ಮರಿಗಳ ಜನನವಾಗುತ್ತದೆ. ಈ ಆನೆ ಮರಿಗಳಿಗೆ ಹಾಲುಣಿಸುವ ಕೇಂದ್ರವನ್ನೂ ಸಹ ಉದ್ಘಾಟಿಸಲಾಯಿತು.
ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಉದ್ಯಾನದಲ್ಲಿ ಜನಿಸುವ ಆನೆಮರಿಗಳ ಪೈಕಿ ಸುಮಾರು 3 ವರ್ಷದ ಮರಿಗಳನ್ನು ಹಾಲುಣಿಸಲು ತಾಯಿಯಿಂದ ಬೇರ್ಪಡಿಸಿ, ಮಾವುತರ ಜೊತೆ ಬಾಂಧವ್ಯ ಬೆಸೆಯಲು 10 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾಗಿರುವ ಹಾಲುಣಿಸುವ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ, ಅಲ್ಲಿ ಮಾವುತರು ಮತ್ತು ಕಾವಾಡಿಗಳು ಆನೆ ಮರಿಗಳಿಗೆ 24 ಗಂಟೆಯೂ ವಿಶೇಷ ಆರೈಕೆ ಮಾಡುತ್ತಾರೆ ಎಂದು ತಿಳಿಸಿದರು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…