ಬನ್ನೇರುಘಟ್ಟ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಗಣರಾಜ್ಯದ ದಿನ ಹುಟ್ಟಿದ ಗಂಡು ಆನೆ ಮರಿಗೆ ʻಸ್ವರಾಜ್ʼ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ನಾಮಕರಣ ಮಾಡಿದರು.
ಉದ್ಯಾನವನದಲ್ಲಿರುವ ವೇದಾ ಎಂಬ ಹೆಣ್ಣಾನೆ ಕಳೆದ ಜನವರಿ 26ರ ಗಣರಾಜ್ಯ ದಿನದಂದು ಗಂಡಾನೆ ಮರಿಗೆ ಜನ್ಮ ನೀಡಿತು. ಹೀಗಾಗಿ ಈ ಆನೆಗೆ ಫಲಕ ಅನಾವರಣ ಮಾಡಿ ‘ಸ್ವರಾಜ್’ ಎಂದು ಸಚಿವ ಈಶ್ವರ್ ಖಂಡ್ರೆ ಹೆಸರಿಟ್ಟರು.
ಆನೆ ಹಾಲುಣಿಸುವ ಕೇಂದ್ರದ ಉದ್ಘಾಟನೆ
ಇದೇ ಸಂದರ್ಭ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಒಟ್ಟು 26 ಆನೆಗಳಿದ್ದು, ಇಲ್ಲಿ ವರ್ಷಕ್ಕೆ 2 ರಿಂದ 3 ಮರಿಗಳ ಜನನವಾಗುತ್ತದೆ. ಈ ಆನೆ ಮರಿಗಳಿಗೆ ಹಾಲುಣಿಸುವ ಕೇಂದ್ರವನ್ನೂ ಸಹ ಉದ್ಘಾಟಿಸಲಾಯಿತು.
ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಉದ್ಯಾನದಲ್ಲಿ ಜನಿಸುವ ಆನೆಮರಿಗಳ ಪೈಕಿ ಸುಮಾರು 3 ವರ್ಷದ ಮರಿಗಳನ್ನು ಹಾಲುಣಿಸಲು ತಾಯಿಯಿಂದ ಬೇರ್ಪಡಿಸಿ, ಮಾವುತರ ಜೊತೆ ಬಾಂಧವ್ಯ ಬೆಸೆಯಲು 10 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾಗಿರುವ ಹಾಲುಣಿಸುವ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ, ಅಲ್ಲಿ ಮಾವುತರು ಮತ್ತು ಕಾವಾಡಿಗಳು ಆನೆ ಮರಿಗಳಿಗೆ 24 ಗಂಟೆಯೂ ವಿಶೇಷ ಆರೈಕೆ ಮಾಡುತ್ತಾರೆ ಎಂದು ತಿಳಿಸಿದರು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…