ಬೆಂಗಳೂರು: ಸಂವಿಧಾನದ ವಿರುದ್ಧ ವಿಷಕಾರುವವರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಲಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಗ್ರಹಿಸಿದ್ದಾರೆ.
ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ 501 ಪುಟಗಳ ಸಂವಿಧಾನವನ್ನು ಫೆಬ್ರವರಿ.3ರಂದು ಮಹಾಕುಂಭಮೇಳದಲ್ಲಿ ಅನಾವರಣ ಮಾಡುವುದಾಗಿ ಉತ್ತರ ಪ್ರದೇಶದ ಶಾಂಭವಿ ಪೀಠಾಧೀಶ್ವರ ಸ್ವಾಮಿ ಆನಂದ್ ಸ್ವರೂಪ್ ಮಹಾರಾಜ್ ಹೇಳಿದ್ದರು.
ಸ್ವಾಮೀಜಿ ಹೇಳಿಕೆ ಖಂಡಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಅವರು, ಪತ್ರಿಕಾ ಹೇಳಿಕೆ ನೀಡಿದ ಕಿಡಿಕಾರಿದ್ದಾರೆ.
ಇಡೀ ದೇಶವೇ ಎಲ್ಲರ ಹಿತ ಕಾಯುವ ಮತ್ತು ಜನ ಸಾಮಾನ್ಯರ ಸಮಾನವಾದ ಏಳಿಗೆಯನ್ನು ಬಯಸಿದ ದೇಶದ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿದ್ದರೆ ಅತ್ತ ಭಾರತದ ಭಾಗವೇ ಆಗಿರುವ ಉತ್ತರ ಪ್ರದೇಶದಲ್ಲಿ ಶಾಂಭವಿ ಪೀಠಾಧೀಶ್ವರ ಸ್ವಾಮಿ ಆನಂದ್ ಸ್ವರೂಪ್ ಮಹಾರಾಜ್ ಅವರು ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ 501 ಪುಟಗಳ ಸಂವಿಧಾನವನ್ನು ಅನಾವರಣ ಮಾಡುವುದಾಗಿ ಹೇಳಿದ್ದಾರೆ.
ಇದನ್ನು ದ್ರೋಹದ ಕೃತ್ಯ ಎಂದು ಜನರಿಗೆ ತಿಳಿಸುವ ಪ್ರಯತ್ನವನ್ನು ಮಾಧ್ಯಮಗಳು ಮಾಡದಿರುವುದು ನನ್ನಲ್ಲಿ ಅಚ್ಚರಿ ಮೂಡಿಸಿದೆ ಎಂದರು.
ಸಂವಿಧಾನದ ಮಹತ್ವ ಅರಿಯದೇ, ವಿಷಕಾರಿಯಾಗಿ ವರ್ತಿಸುವ ಇಂತ ಸ್ವಾಮೀಜಿಗಳ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ದೇಶದ್ರೋಹದ ಪ್ರಕರಣವನ್ನು ದಾಖಲಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…