ಗದಗ: ಸಂಸದ ಜಗದೀಶ್ ಶೆಟ್ಟರ್ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದ ಜನರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯದ ವಿರುದ್ಧ ಧ್ವನಿ ಎತ್ತಲಿ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ ಎಂಬ ಸಂಸದ ಜಗದೀಶ್ ಶೆಟ್ಟರ್ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಈ ಹಿಂದೆ ರಾಜ್ಯದಲ್ಲಿ ತೀವ್ರ ಬರಗಾಲ ಇದ್ದಾಗಲೂ ಕೇಂದ್ರ ಸರ್ಕಾರ ಪರಿಹಾರ ನೀಡಲಿಲ್ಲ. ಸುಪ್ರೀಂ ಕೋರ್ಟ್ಗೆ ಹೋದರೂ ರಾಜ್ಯಕ್ಕೆ ಪರಿಹಾರದ ಹಣ ಸಿಗಲಿಲ್ಲ ಎಂದರು.
ಇನ್ನು ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ ಹಣ ತಾಂತ್ರಿಕ ಕಾರಣದಿಂದ ವಿಳಂಬ ಆಗಿದೆಯೇ ಹೊರತು ಹಣದ ಕೊರತೆಯಿಂದಲ್ಲ. ಈ ಎರಡೂ ಯೋಜನೆಗಳ ಹಣವನ್ನು ಪ್ರತಿ ತಿಂಗಳು ನಿರಂತರವಾಗಿ ಮುಟ್ಟಿಸುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು.
ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು…
ಜೆರುಸಲೆಮ್ : ಇಸ್ರೇಲ್ನ ಸೇನಾ ದಾಳಿಯಲ್ಲಿ ಇರಾನ್ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…