ಗದಗ: ಸಂಸದ ಜಗದೀಶ್ ಶೆಟ್ಟರ್ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದ ಜನರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯದ ವಿರುದ್ಧ ಧ್ವನಿ ಎತ್ತಲಿ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ ಎಂಬ ಸಂಸದ ಜಗದೀಶ್ ಶೆಟ್ಟರ್ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಈ ಹಿಂದೆ ರಾಜ್ಯದಲ್ಲಿ ತೀವ್ರ ಬರಗಾಲ ಇದ್ದಾಗಲೂ ಕೇಂದ್ರ ಸರ್ಕಾರ ಪರಿಹಾರ ನೀಡಲಿಲ್ಲ. ಸುಪ್ರೀಂ ಕೋರ್ಟ್ಗೆ ಹೋದರೂ ರಾಜ್ಯಕ್ಕೆ ಪರಿಹಾರದ ಹಣ ಸಿಗಲಿಲ್ಲ ಎಂದರು.
ಇನ್ನು ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ ಹಣ ತಾಂತ್ರಿಕ ಕಾರಣದಿಂದ ವಿಳಂಬ ಆಗಿದೆಯೇ ಹೊರತು ಹಣದ ಕೊರತೆಯಿಂದಲ್ಲ. ಈ ಎರಡೂ ಯೋಜನೆಗಳ ಹಣವನ್ನು ಪ್ರತಿ ತಿಂಗಳು ನಿರಂತರವಾಗಿ ಮುಟ್ಟಿಸುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…