ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಡಾ ನಿವೇಶನಗಳ ಹಂಚಿಕೆ ಕುರಿತ ನೀಲನಕ್ಷೆಯನ್ನ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಮುಡಾ ಹಗರಣ ಬಂದ್ರೆ ದೇವರೇ ಕಾಪಾಡಬೇಕು. ೬೨ ಕೋಟಿ ಕೊಡಬೇಕು ಅಂತ ಅಯ್ಯೂ ನನ್ನ ಜಮೀನು ಅಂತಾರೆ. ಇದು ಪಿತ್ರಾರ್ಜಿತ ಆಸ್ತಿನಾ..? ಎಲ್ಲ ದಾಖಲೆ ಇಟ್ಟುಕೊಂಡಿದ್ದೀನಿ. ಅವರ ಪತ್ನಿ ಪಾರ್ವತಿ ಖರೀದಿ ಮಾಡಿದ್ದು ಅಂತ ಪ್ಲಾನ್ ಸ್ಯಾಕ್ಷನ್ ಆಗಿರೋದು..? ಇವರು ಭೂಮಿ ಖರೀದಿ ಮಾಡಿದ್ದು ಯಾವಾಗ..? ಮುಡಾದವರು ಪಾರ್ಕ್, ಸೈಟ್ , ಹಂಚಿಕೆ ಮಾಡಿದ ಮೇಲೆ ಖರೀದಿ ಮಾಡಿದ್ದಾರೆ.
೧೯೯೨ ರಲ್ಲಿ ಮುಡಾ ಅಧಿಸೂಚನೆ ೧೯೯೭ ರಲ್ಲಿ ಅಂತಿಮ ನೋಟಿಫಿಕೇಷನ್ ಆಯ್ತು. ನಿಂಗ@ ಜವರಾಗೆ ಅಕೌಂಟ್ ಹಣ ಹಾಕದೆ, ೩ ಎಕರೆ ೧೬ ಗುಂಟೆಗೆ ಹಣ ಕೋರ್ಟ್ ನಲ್ಲಿ ಕಟ್ಟಿದ್ದಾರೆ. ನೀವು ಈ ಅಗೌರವಾನ್ವಿತ ಉಪಮುಖ್ಯಮಂತ್ರಿಗಳು. ಜವರಾ ಯಾವಾಗ ಸತ್ತ ಸ್ವಲ್ಪ ಹೇಳ್ತೀರಾ..? ಸತ್ತವರ ಹೆಸರಿಗೆ ಖಾತೆ ಡಿನೋಟಿಫಿಕೇಷನ್ ಮಾಡೋಕೆ ಆಗುತ್ತಾ..? ಅರ್ಜಿ ಕೊಟ್ಟವರು ಯಾರು..? ನಾಲ್ಕು ವರ್ಷಗಳ ಕಾಲ ಯಾಕೆ ಸೈಲೆಂಟ್ ಆಗಿದ್ರಿ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…