ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಸಂಬಂಧ ಮುಡಾ ನಿವೇಶನಗಳ ಹಂಚಿಕೆ ಕುರಿತ ನೀಲನಕ್ಷೆಯನ್ನ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಮುಡಾ ಹಗರಣ ಬಂದ್ರೆ ದೇವರೇ ಕಾಪಾಡಬೇಕು. ೬೨ ಕೋಟಿ ಕೊಡಬೇಕು ಅಂತ ಅಯ್ಯೂ ನನ್ನ ಜಮೀನು ಅಂತಾರೆ. ಇದು ಪಿತ್ರಾರ್ಜಿತ ಆಸ್ತಿನಾ..? ಎಲ್ಲ ದಾಖಲೆ ಇಟ್ಟುಕೊಂಡಿದ್ದೀನಿ. ಅವರ ಪತ್ನಿ ಪಾರ್ವತಿ ಖರೀದಿ ಮಾಡಿದ್ದು ಅಂತ ಪ್ಲಾನ್ ಸ್ಯಾಕ್ಷನ್ ಆಗಿರೋದು..? ಇವರು ಭೂಮಿ ಖರೀದಿ ಮಾಡಿದ್ದು ಯಾವಾಗ..? ಮುಡಾದವರು ಪಾರ್ಕ್, ಸೈಟ್ , ಹಂಚಿಕೆ ಮಾಡಿದ ಮೇಲೆ ಖರೀದಿ ಮಾಡಿದ್ದಾರೆ.
೧೯೯೨ ರಲ್ಲಿ ಮುಡಾ ಅಧಿಸೂಚನೆ ೧೯೯೭ ರಲ್ಲಿ ಅಂತಿಮ ನೋಟಿಫಿಕೇಷನ್ ಆಯ್ತು. ನಿಂಗ@ ಜವರಾಗೆ ಅಕೌಂಟ್ ಹಣ ಹಾಕದೆ, ೩ ಎಕರೆ ೧೬ ಗುಂಟೆಗೆ ಹಣ ಕೋರ್ಟ್ ನಲ್ಲಿ ಕಟ್ಟಿದ್ದಾರೆ. ನೀವು ಈ ಅಗೌರವಾನ್ವಿತ ಉಪಮುಖ್ಯಮಂತ್ರಿಗಳು. ಜವರಾ ಯಾವಾಗ ಸತ್ತ ಸ್ವಲ್ಪ ಹೇಳ್ತೀರಾ..? ಸತ್ತವರ ಹೆಸರಿಗೆ ಖಾತೆ ಡಿನೋಟಿಫಿಕೇಷನ್ ಮಾಡೋಕೆ ಆಗುತ್ತಾ..? ಅರ್ಜಿ ಕೊಟ್ಟವರು ಯಾರು..? ನಾಲ್ಕು ವರ್ಷಗಳ ಕಾಲ ಯಾಕೆ ಸೈಲೆಂಟ್ ಆಗಿದ್ರಿ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…