ರಾಜ್ಯ

ಸಭೆಯಲ್ಲಿ ಕೊಡುವ ಗೋಡಂಬಿ, ಬಾದಾಮಿ ತಿನ್ನೋದಿಕ್ಕೆ ಹೋಗಬೇಕಿತ್ತಾ? -ಎಚ್ ಡಿಕೆ

ಬೆಂಗಳೂರು : ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್‌ ಗಿರಿ ಕೊಡಲು ಸಭೆಗೆ ಹೋಗಬೇಕಿತ್ತಾ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ನಡೆದ ಸರ್ವಪಕ್ಷಗಳ ಸಭೆಗೆ ಗೈರಾದ ವಿಚಾರಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿಕೆ,  ಸಿಡಬ್ಲ್ಯೂಆರ್‌ ಸಿ ಶಿಫಾರಸು ಹಿನ್ನೆಲೆ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಅವರು ಸಭೆ ಕರೆದಿದ್ದರು..? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದುಹೋಗಿದೆ. ಕಬಿನಿಯಿಂದ ನೀರು ಹರಿದಿದೆ. ಸಭೆಯಲ್ಲಿ ಕೊಡುವ ಗೋಡಂಬಿ, ಬಾದಾಮಿ ತಿನ್ನೋದಿಕ್ಕೆ ನಾನು ಹೋಗಬೇಕಿತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಯಾಕೆ ಸಭೆ ಮಾಡಿದ್ದೀರಿ..? ಏನು ನಿರ್ಧಾರ ತೆಗೆದುಕೊಂಡರಿ..? ಸಭೆ ಮಾಡಿದ ಮೇಲೂ ಕಡಿಮೆ ಪ್ರಮಾಣದ ನೀರು ಬಿಡಲು ಒಪ್ಪಿಗೆ ಸೂಚಿಸಿದೆ. ತೆಲಂಗಾಣಕ್ಕೆ ಹೋದರೆ ಅಲ್ಲಿ ಸಿಎಂ ಫೋನ್‌ ಮಾಡಿ ಸಹಕಾರ ಕೇಳ್ತಾರೆ. ಆದರೆ ನಾನು ರಾಜ್ಯದ ಯೋಜನೆಗಳಿಗೆ ಸಹಿ ಹಾಕಿದರೆ ಅದನ್ನ ನಿಲ್ಲಿಸುತ್ತಾರೆ ಎಂದು ಕಿಡಿಕಾರಿದರು.

ಜೊತೆಗೆ ಮಂಡ್ಯದಲ್ಲಿ ಜನತಾ ದರ್ಶನ ಮಾಡಿದರೆ ಅಧಿಕಾರಿಗಳು ಭಾಗಿಯಾಗಬಾರದು ಎಂದು ಆದೇಶ ಮಾಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಬಾರದು ಎಂದು ಆದೇಶ ಮಾಡಿದ ಮೇಲೆ ನಮ್ಮಿಂದ ಏನು ಬಯಸುತ್ತೀರಾ…? ಯಾವ ಸಂದರ್ಭ ಯಾವ ಕಾರ್ಯಕ್ರಮಕ್ಕೆ ಹೋಗಬೇಕು ಎಂದು ನನಗೆ ಗೊತ್ತಿದೆ. ನಾನು ಇವರ ಅನುಮತಿ ಪಡೆಯಬೇಕಾ ಎಂದು ವಾಗ್ದಾಳಿ ನಡೆಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

10 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

23 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

29 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

1 hour ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

3 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

3 hours ago