ರಾಜ್ಯ

ಸಭೆಯಲ್ಲಿ ಕೊಡುವ ಗೋಡಂಬಿ, ಬಾದಾಮಿ ತಿನ್ನೋದಿಕ್ಕೆ ಹೋಗಬೇಕಿತ್ತಾ? -ಎಚ್ ಡಿಕೆ

ಬೆಂಗಳೂರು : ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್‌ ಗಿರಿ ಕೊಡಲು ಸಭೆಗೆ ಹೋಗಬೇಕಿತ್ತಾ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ನಡೆದ ಸರ್ವಪಕ್ಷಗಳ ಸಭೆಗೆ ಗೈರಾದ ವಿಚಾರಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿಕೆ,  ಸಿಡಬ್ಲ್ಯೂಆರ್‌ ಸಿ ಶಿಫಾರಸು ಹಿನ್ನೆಲೆ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಅವರು ಸಭೆ ಕರೆದಿದ್ದರು..? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದುಹೋಗಿದೆ. ಕಬಿನಿಯಿಂದ ನೀರು ಹರಿದಿದೆ. ಸಭೆಯಲ್ಲಿ ಕೊಡುವ ಗೋಡಂಬಿ, ಬಾದಾಮಿ ತಿನ್ನೋದಿಕ್ಕೆ ನಾನು ಹೋಗಬೇಕಿತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಯಾಕೆ ಸಭೆ ಮಾಡಿದ್ದೀರಿ..? ಏನು ನಿರ್ಧಾರ ತೆಗೆದುಕೊಂಡರಿ..? ಸಭೆ ಮಾಡಿದ ಮೇಲೂ ಕಡಿಮೆ ಪ್ರಮಾಣದ ನೀರು ಬಿಡಲು ಒಪ್ಪಿಗೆ ಸೂಚಿಸಿದೆ. ತೆಲಂಗಾಣಕ್ಕೆ ಹೋದರೆ ಅಲ್ಲಿ ಸಿಎಂ ಫೋನ್‌ ಮಾಡಿ ಸಹಕಾರ ಕೇಳ್ತಾರೆ. ಆದರೆ ನಾನು ರಾಜ್ಯದ ಯೋಜನೆಗಳಿಗೆ ಸಹಿ ಹಾಕಿದರೆ ಅದನ್ನ ನಿಲ್ಲಿಸುತ್ತಾರೆ ಎಂದು ಕಿಡಿಕಾರಿದರು.

ಜೊತೆಗೆ ಮಂಡ್ಯದಲ್ಲಿ ಜನತಾ ದರ್ಶನ ಮಾಡಿದರೆ ಅಧಿಕಾರಿಗಳು ಭಾಗಿಯಾಗಬಾರದು ಎಂದು ಆದೇಶ ಮಾಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಬಾರದು ಎಂದು ಆದೇಶ ಮಾಡಿದ ಮೇಲೆ ನಮ್ಮಿಂದ ಏನು ಬಯಸುತ್ತೀರಾ…? ಯಾವ ಸಂದರ್ಭ ಯಾವ ಕಾರ್ಯಕ್ರಮಕ್ಕೆ ಹೋಗಬೇಕು ಎಂದು ನನಗೆ ಗೊತ್ತಿದೆ. ನಾನು ಇವರ ಅನುಮತಿ ಪಡೆಯಬೇಕಾ ಎಂದು ವಾಗ್ದಾಳಿ ನಡೆಸಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

5 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

6 hours ago

ಏಪ್ರಿಲ್ 1ರಿಂದ ಜಾರಿ ಟೋಲ್‌ ದರ ಹೆಚ್ಚಳ ; ಮೈ-ಬೆಂ ಹೆದ್ದಾರಿ ಪ್ರಯಾಣವೂ ದುಬಾರಿ

ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…

6 hours ago

ಮಧ್ಯಪ್ರಾಚ್ಯ ಸಂಘರ್ಷ : ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…

7 hours ago

ಕರ್ನಾಟಕ ಹೈಕೋರ್ಟ್‌ : 70 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…

7 hours ago

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

7 hours ago