ಬೆಂಗಳೂರು : ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್ ಗಿರಿ ಕೊಡಲು ಸಭೆಗೆ ಹೋಗಬೇಕಿತ್ತಾ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.
ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ನಡೆದ ಸರ್ವಪಕ್ಷಗಳ ಸಭೆಗೆ ಗೈರಾದ ವಿಚಾರಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿಕೆ, ಸಿಡಬ್ಲ್ಯೂಆರ್ ಸಿ ಶಿಫಾರಸು ಹಿನ್ನೆಲೆ ಸಭೆ ಕರೆದಿದ್ದರು. ಯಾವ ವಿಚಾರ ಚರ್ಚಿಸಲು ಅವರು ಸಭೆ ಕರೆದಿದ್ದರು..? ಚರ್ಚೆಗೂ ಮುನ್ನವೇ ತಮಿಳುನಾಡಿಗೆ ನೀರು ಹರಿದುಹೋಗಿದೆ. ಕಬಿನಿಯಿಂದ ನೀರು ಹರಿದಿದೆ. ಸಭೆಯಲ್ಲಿ ಕೊಡುವ ಗೋಡಂಬಿ, ಬಾದಾಮಿ ತಿನ್ನೋದಿಕ್ಕೆ ನಾನು ಹೋಗಬೇಕಿತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಯಾಕೆ ಸಭೆ ಮಾಡಿದ್ದೀರಿ..? ಏನು ನಿರ್ಧಾರ ತೆಗೆದುಕೊಂಡರಿ..? ಸಭೆ ಮಾಡಿದ ಮೇಲೂ ಕಡಿಮೆ ಪ್ರಮಾಣದ ನೀರು ಬಿಡಲು ಒಪ್ಪಿಗೆ ಸೂಚಿಸಿದೆ. ತೆಲಂಗಾಣಕ್ಕೆ ಹೋದರೆ ಅಲ್ಲಿ ಸಿಎಂ ಫೋನ್ ಮಾಡಿ ಸಹಕಾರ ಕೇಳ್ತಾರೆ. ಆದರೆ ನಾನು ರಾಜ್ಯದ ಯೋಜನೆಗಳಿಗೆ ಸಹಿ ಹಾಕಿದರೆ ಅದನ್ನ ನಿಲ್ಲಿಸುತ್ತಾರೆ ಎಂದು ಕಿಡಿಕಾರಿದರು.
ಜೊತೆಗೆ ಮಂಡ್ಯದಲ್ಲಿ ಜನತಾ ದರ್ಶನ ಮಾಡಿದರೆ ಅಧಿಕಾರಿಗಳು ಭಾಗಿಯಾಗಬಾರದು ಎಂದು ಆದೇಶ ಮಾಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಬಾರದು ಎಂದು ಆದೇಶ ಮಾಡಿದ ಮೇಲೆ ನಮ್ಮಿಂದ ಏನು ಬಯಸುತ್ತೀರಾ…? ಯಾವ ಸಂದರ್ಭ ಯಾವ ಕಾರ್ಯಕ್ರಮಕ್ಕೆ ಹೋಗಬೇಕು ಎಂದು ನನಗೆ ಗೊತ್ತಿದೆ. ನಾನು ಇವರ ಅನುಮತಿ ಪಡೆಯಬೇಕಾ ಎಂದು ವಾಗ್ದಾಳಿ ನಡೆಸಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…