ರಾಜ್ಯ

ಸಚಿವೆ ಹೆಬ್ಬಾಳಕರ ಕಾರು ಅಪಘಾತ: ತಪ್ಪಿದ ದುರಂತ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಬೆಳಿಗ್ಗೆ 5 ವೇಳೆಗೆ ಅಪಘಾತ ಸಂಭವಿಸಿದ್ದು, ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಘಟನೆ ಜರುಗಿದೆ.
ಸಚಿವೆ ಪ್ರಾಯಾಣಿಸುತ್ತಿದ್ದ ಕಾರು ಮರಕ್ಕೆ ಗುದ್ದಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಸಚಿವೆ ಹೆಬ್ಬಾಳಕರ್‌ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಾಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವುದು ತಿಳಿದುಬಂದಿದೆ.
ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದು, ಸಚಿವೆ ಸೇರಿದಂತೆ ಎಲ್ಲರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

41 mins ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

50 mins ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

58 mins ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

1 hour ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

1 hour ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

2 hours ago