ನಾಲ್ಕು ವರ್ಷಗಳ ಕಾಲ ಬಿಜೆಪಿ ಸರ್ಕಾರದ ಸಾಧನೆಯೇನು? ಕಮಲ ನಾಯಕರಿಗೆ ಸಚಿವರ ಪ್ರಶ್ನೆ
ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.
ಸೋಮವಾರ ಆರಂಭಗೊಂಡ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಮಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರ ಆಡಳಿತವನ್ನು ರಾಜ್ಯದ ಜನರು ನೋಡಿದ್ದಾರೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ ಎನ್ನುವುದನ್ನು ಅವರು ಮೊದಲು ಅವಲೋಕನ ಮಾಡಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು.
ಎಥಿಕ್ಸ್ ಕಮಿಟಿ ವಿಚಾರ ಗೊತ್ತಿಲ್ಲ
ಸಚಿವರ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ ಅಶ್ಲೀಲ ಪದ ಪ್ರಯೋಗ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾನು ಇಂದು ಬೆಂಗಳೂರಿಗೆ ಬಂದಿದ್ದು, ನಿಮಗೆ (ಮಾಧ್ಯಮ) ಎಷ್ಟು ಮಾಹಿತಿ ಇದೆಯೋ, ಅಷ್ಟೇ ಮಾಹಿತಿ ನನಗೂ ಇದೆ. ಎಥಿಕ್ಸ್ ಕಮಿಟಿಗೆ ನೀಡಿರುವ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದರು.
ನಾನು ಆಸ್ಪತ್ರೆಯಲ್ಲಿದ್ದಾಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆ ವೇಳೆಯಲ್ಲೂ ಪ್ರಕರಣದ ಬಗ್ಗೆ ಏನೂ ಮಾತನಾಡಲಿಲ್ಲ. ಈ ರೀತಿ ಯಾರಿಗೂ ಆಗಬಾರದೆನ್ನುವುದೇ ನನ್ನ ಕಳಕಳಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಶಾಲೆಯ ಶಿಕ್ಷಕನೋರ್ವ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವರದಿ ಗಮನಕ್ಕೆ ಬಂದಿದ್ದು, ಖಂಡಿತವಾಗಿ ಸರ್ಕಾರವು ಮಕ್ಕಳ ಹಾಗೂ ಪೋಷಕರ ಪರ ನಿಲ್ಲುತ್ತದೆ. ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ. ಈ ಪ್ರಕರಣದಲ್ಲಿ ದೂರು ದಾಖಲಾಗಿರುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರನ್ನು ಪೊಲೀಸ್ ಠಾಣೆಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುವುದು. ಈ ಬಗ್ಗೆ ದೂರು ದಾಖಲಿಸಿಕೊಳ್ಳುವಂತೆಯೂ ತಿಳಿಸಿರುವುದಾಗಿ ಸಚಿವರು ಹೇಳಿದರು.
ಮಂಡ್ಯ: ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…