AICC President
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಲ್ಲಿ ವಿಶೇಷವೇನಿಲ್ಲ. ಸೌಹಾರ್ದಯುತ ಭೇಟಿ ಇದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿ, ಕುಶಲೋಪರಿ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಖರ್ಗೆ ಅವರು ನಮ್ಮ ಪಕ್ಷದ ಧುರೀಣರು ಅವರ ಆಶೀರ್ವಾದ ಪಡೆಯುವ ಸಲುವಾಗಿ ಭೇಟಿ ಮಾಡಿದೆ ಎಂದರು.
ಖರ್ಗೆ ಅವರೊಂದಿಗೆ ಸುಮಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಹಲವು ದಿನಗಳ ಬಳಿಕ ಅವರನ್ನು ಭೇಟಿ ಮಾಡಿದೆ. ಕಳೆದ ಬಾರಿ ದೆಹಲಿ ಪ್ರವಾಸಕ್ಕೆ ತೆರಳಿದಾಗಲೂ ಖರ್ಗೆ ಸಾಹೇಬರು ಸಿಕ್ಕಿರಲಿಲ್ಲ. ಅವರ ಮಾರ್ಗದರ್ಶನ ನಮಗೆ ಅಗತ್ಯ. ನಮ್ಮಇಲಾಖೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ನನ್ನ ಆರೋಗ್ಯವನ್ನು ವಿಚಾರಿಸಿದರು. ಜಿಲ್ಲಾ ಪ್ರವಾಸ ಮಾಡುತ್ತಿದ್ದೀರಾ ಅಂತ ಕೇಳಿದರು. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅರ್ಹ ಮಹಿಳೆಯರಿಗೆ ಯೋಜನೆಯ ಹಣ ತಲುಪುತ್ತಿದ್ಯಾ, ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಕೇಳಿದರು ಎಂದು ಸಚಿವರು ತಿಳಿಸಿದರು.
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…