AICC President
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಲ್ಲಿ ವಿಶೇಷವೇನಿಲ್ಲ. ಸೌಹಾರ್ದಯುತ ಭೇಟಿ ಇದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿ, ಕುಶಲೋಪರಿ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಖರ್ಗೆ ಅವರು ನಮ್ಮ ಪಕ್ಷದ ಧುರೀಣರು ಅವರ ಆಶೀರ್ವಾದ ಪಡೆಯುವ ಸಲುವಾಗಿ ಭೇಟಿ ಮಾಡಿದೆ ಎಂದರು.
ಖರ್ಗೆ ಅವರೊಂದಿಗೆ ಸುಮಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಹಲವು ದಿನಗಳ ಬಳಿಕ ಅವರನ್ನು ಭೇಟಿ ಮಾಡಿದೆ. ಕಳೆದ ಬಾರಿ ದೆಹಲಿ ಪ್ರವಾಸಕ್ಕೆ ತೆರಳಿದಾಗಲೂ ಖರ್ಗೆ ಸಾಹೇಬರು ಸಿಕ್ಕಿರಲಿಲ್ಲ. ಅವರ ಮಾರ್ಗದರ್ಶನ ನಮಗೆ ಅಗತ್ಯ. ನಮ್ಮಇಲಾಖೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ನನ್ನ ಆರೋಗ್ಯವನ್ನು ವಿಚಾರಿಸಿದರು. ಜಿಲ್ಲಾ ಪ್ರವಾಸ ಮಾಡುತ್ತಿದ್ದೀರಾ ಅಂತ ಕೇಳಿದರು. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅರ್ಹ ಮಹಿಳೆಯರಿಗೆ ಯೋಜನೆಯ ಹಣ ತಲುಪುತ್ತಿದ್ಯಾ, ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಕೇಳಿದರು ಎಂದು ಸಚಿವರು ತಿಳಿಸಿದರು.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…