AICC President
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಲ್ಲಿ ವಿಶೇಷವೇನಿಲ್ಲ. ಸೌಹಾರ್ದಯುತ ಭೇಟಿ ಇದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಭೇಟಿ ನೀಡಿ, ಕುಶಲೋಪರಿ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಖರ್ಗೆ ಅವರು ನಮ್ಮ ಪಕ್ಷದ ಧುರೀಣರು ಅವರ ಆಶೀರ್ವಾದ ಪಡೆಯುವ ಸಲುವಾಗಿ ಭೇಟಿ ಮಾಡಿದೆ ಎಂದರು.
ಖರ್ಗೆ ಅವರೊಂದಿಗೆ ಸುಮಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಹಲವು ದಿನಗಳ ಬಳಿಕ ಅವರನ್ನು ಭೇಟಿ ಮಾಡಿದೆ. ಕಳೆದ ಬಾರಿ ದೆಹಲಿ ಪ್ರವಾಸಕ್ಕೆ ತೆರಳಿದಾಗಲೂ ಖರ್ಗೆ ಸಾಹೇಬರು ಸಿಕ್ಕಿರಲಿಲ್ಲ. ಅವರ ಮಾರ್ಗದರ್ಶನ ನಮಗೆ ಅಗತ್ಯ. ನಮ್ಮಇಲಾಖೆ, ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ನನ್ನ ಆರೋಗ್ಯವನ್ನು ವಿಚಾರಿಸಿದರು. ಜಿಲ್ಲಾ ಪ್ರವಾಸ ಮಾಡುತ್ತಿದ್ದೀರಾ ಅಂತ ಕೇಳಿದರು. ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅರ್ಹ ಮಹಿಳೆಯರಿಗೆ ಯೋಜನೆಯ ಹಣ ತಲುಪುತ್ತಿದ್ಯಾ, ಇಲಾಖೆಯ ಕಾರ್ಯವೈಖರಿ ಬಗ್ಗೆಯೂ ಕೇಳಿದರು ಎಂದು ಸಚಿವರು ತಿಳಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…