ರಾಜ್ಯ

ಬೆಂಗಳೂರಿನಲ್ಲಿ ಅಪಾಯಕಾರಿ ವೃಕ್ಷ, ಕೊಂಬೆ ತೆರವಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಭಾರೀ ಗಾಳಿ, ಮಳೆಗೆ ಮರ ಹಾಗೂ ಕೊಂಬೆಗಳು ಬಿದ್ದು ಪ್ರಾಣಹಾನಿ ಹಾಗೂ ಆಸ್ತಿಹಾನಿ ಆಗುತ್ತಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ವೃಕ್ಷಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸಬೇಕು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದ 29 ವರ್ಷದ ಅಕ್ಷಯ್‌ ಮೃತಪಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಅವರು, ಮಳೆ, ಗಾಳಿಗೆ ಟೊಳ್ಳು ಮರಗಳು ಮತ್ತು ಬೇರು ಕಚ್ಚದ ಮರಗಳು ಧರೆಗುರುಳುತ್ತಿವೆ. ಇದಕ್ಕೆ ಕಾರಣ ಬೇರಿಗೆ ನೀರು ಇಳಿಯದಂತೆ ಹಾಕಿರುವ ಕಾಂಕ್ರೀಟ್‌, ಕಲ್ಲಿನ ಚಪ್ಪಡಿ, ಟೈಲ್ಸ್‌ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣವು ತೀರ್ಪು ನೀಡಿದ್ದು, ಸರ್ಕಾರ ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಿದೆ. ನಿನ್ನೆ ತಾನೇ ಬಿಬಿಎಂಪಿ ಆಯುಕ್ತರು ಮರದ ಸುತ್ತ ಇರುವ ಕಾಂಕ್ರಿಟ್‌ ತೆರವಿಗೆ ಆದೇಶ ನೀಡಿದ್ದಾರೆ. ಇನ್ನು ಮುಂದೆ ರಸ್ತೆ ಬದಿ ಸಸಿಗಳನ್ನು ನೆಡುವಾಗ ಒಂದು ಮೀಟರ್‌ ಸುತ್ತಳತೆಯಲ್ಲಿ ಮಣ್ಣು ಇರುವುದನ್ನ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

1 hour ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

3 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

3 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

4 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

6 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

7 hours ago