ರಾಜ್ಯ

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕರು ಮತ್ತು ಚಾರಣಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶದವರೆಗೆ ಚಿರತೆ, ಹುಲಿ, ಆನೆ, ಕರಡಿ ಮತ್ತಿತರೆ ವನ್ಯಜೀವಿಗಳು ಸಂಚರಿಸುವ ಮತ್ತು ಮಾನವ-ವನ್ಯಜೀವಿ ಸಂಘರ್ಷ ಸಂಭವಿಸಿರುವ ಕಡೆಗಳಲ್ಲಿ ಚಾರಣ ಮತ್ತು ಸಂಚಾರ ಪಥಗಳನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಸೂಚಿಸಿದ್ದು, ಈ ಸಂಬಂಧ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ.

ಮುಖ್ಯ ವನ್ಯಜೀವಿ ಪರಿಪಾಲಕರಿಂದ ಅಧಿಕೃತ ಸುತ್ತೋಲೆ: ಚಾರಣ ಚಟುವಟಿಕೆಗಳನ್ನು ಸುರಕ್ಷಿತ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ನಡೆಸುವಂತೆ ಅರಣ್ಯ ಸಚಿವ ಖಂಡ್ರೆ ಸೂಚಿಸಿದ್ದು, ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ. ಒಂದೊಮ್ಮೆ ಎಸ್.ಓ.ಪಿ. ಪಾಲನೆಗೆ ಸಿದ್ಧತೆ ಮಾಡಿಕೊಳ್ಳದೇ ಇದ್ದಲ್ಲಿ ಅಂತಹ ಚಾರಣ ಪಥಗಳಲ್ಲಿ ಚಟುವಟಿಕೆಯನ್ನು ಸ್ಥಗಿತಗೊಳಿಸಲು ಸೂಚಿಸಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆ ಮತ್ತು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಮೇಲ್ವಿಚಾರಣೆಯಲ್ಲಿ ಕೈಗೊಳ್ಳುವ ಚಾರಣಪಥಗಳಲ್ಲಿ ಎಸ್.ಓ.ಪಿ. ಪಾಲನೆಗೆ ಪೂರ್ವಸಿದ್ಧತೆ ಮಾಡಿಕೊಂಡು ನಂತರ ಚಾರಣ ಚಟುವಟಿಕೆ ಮುಂದುವರಿಸುವಂತೆ ಆದೇಶ ನೀಡಲಾಗಿದ್ದು, ಅಧಿಕೃತವಾಗಿ ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಎರಡು ಪ್ರತ್ಯೇಕ ಸುತ್ತೋಲೆಗಳನ್ನು ಹೊರಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago