ರಾಜ್ಯ

ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

ಬೆಂಗಳೂರು : ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ತಮ್ಮ ಸ್ವಕ್ಷೇತ್ರ ಸರ್ವಜ್ಞನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿದರಲ್ಲದೆ, ಕೆಲಸ ತ್ವರಿತಗೊಳಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸರ್ವಜ್ಞನಗರ ಕ್ಷೇತ್ರದಲ್ಲಿ ನವೀಕೃತ ಸ್ಮಶಾನ ಉದ್ಘಾಟನೆ ನೆರವೇರಿಸಿದ ಅವರು, ವಿವಿಧೆಡೆ ಪಾದಚಾರಿ ಮಾರ್ಗ ಮತ್ತು ವೈಟ್ ಟ್ಯಾಪಿಂಗ್ ಕಾಮಗಾರಿ ಪರಿಶೀಲನೆ ಮಾಡಿದರು. ಅಲ್ಲದೆ, ತ್ಯಾಜ್ಯ ಸಾಗಣಿಕೆ ಕೇಂದ್ರಕ್ಕೆ ತೆರಳಿ ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಿದರು.

ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮೂಲ ಸೌಕರ್ಯ ಕಲ್ಪಿಸುವ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈ ಎಲ್ಲಾ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು,” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಚಿವರು ಕಲ್ಯಾಣ ನಗರದಲ್ಲಿ ಆರಂಭವಾದ ಬ್ರ್ಯೂ ಲಾ ಪಾಕ್ಸಿ ಕೆಫೆಯನ್ನು ಉದ್ಘಾಟಿಸಿದರು. ಬಳಿಕ ನಾಗವಾರ ಮುಖ್ಯ ರಸ್ತೆಯ ಉಮರ್ ನಗರದ ಮಸ್ಜಿದ್-ಇ-ಉಮರ್ ಬಿನ್ ಕತ್ತಾಬ್ ನಲ್ಲಿ ನವೀಕರಣಗೊಂಡ ಸ್ಮಶಾನವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ನಾಗವಾರ ಮುಖ್ಯ ರಸ್ತೆ, ಗೋವಿಂದಪುರ ರಸ್ತೆ, ಹೆಣ್ಣೂರು ಮುಖ್ಯ ರಸ್ತೆ, ನೆಹರೂ ರಸ್ತೆಗಳಲ್ಲಿ ಕೈಗೊಂಡಿರುವ ಫುಟ್ ಪಾತ್, ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಅಲ್ಲದೆ, ಎಚ್ ಬಿಆರ್ ಲೇಔಟ್ ನಲ್ಲಿರುವ ತ್ಯಾಜ್ಯ ಸಾಗಣಾ ಕೇಂದ್ರವನ್ನು ವೀಕ್ಷಿಸಿದರು.

ಉಮರ್ ನಗರದ ಮಸ್ಜಿದ್-ಇ-ಉಮರ್ ಬಿನ್ ಕತ್ತಾಬ್ ನಲ್ಲಿ ನವೀಕರಣಗೊಂಡ ಸ್ಮಶಾನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, “ಸರ್ವಜ್ಞನಗರ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಜನರಿದ್ದು, ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಕೊಡಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ,” ಎಂದು ಹೇಳಿದರು.

“ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಲ್ಲಾ ಸಮುದಾಯಗಳನ್ನು ಒಂದೇ ರೀತಿ ಕಾಣುತ್ತಿದೆ. ಆದರೆ, ಕೆಲವರು ಜಾತಿ, ಧರ್ಮಗಳ ಮಧ್ಯೆ ವೈಷಮ್ಯ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅಂಥವರಿಗೆ ಅವಕಾಶ ಮಾಡಿಕೊಡದೆ ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕ್ಷೇತ್ರವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ರೂಪಿಸುವುದು ನಮ್ಮ ಉದ್ದೇಶ,” ಎಂದರು.

ಸ್ಥಳೀಯ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಸಚಿವರ ಭೇಟಿ ವೇಳೆ ಆ ಭಾಗದ ನಾಗರಿಕರು ತಮ್ಮ ಪ್ರದೇಶದ ಸಮಸ್ಯೆಗಳನ್ನು ಹೇಳಿಕೊಂಡರಲ್ಲದೆ, ಅವುಗಳನ್ನು ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

2 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

2 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

3 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

4 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

6 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

8 hours ago