ರಾಜ್ಯ

ಅಭಿವೃದ್ಧಿ ಕಾರ್ಯ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚನೆ

ಬೆಂಗಳೂರು : ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ತಮ್ಮ ಸ್ವಕ್ಷೇತ್ರ ಸರ್ವಜ್ಞನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿದರಲ್ಲದೆ, ಕೆಲಸ ತ್ವರಿತಗೊಳಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸರ್ವಜ್ಞನಗರ ಕ್ಷೇತ್ರದಲ್ಲಿ ನವೀಕೃತ ಸ್ಮಶಾನ ಉದ್ಘಾಟನೆ ನೆರವೇರಿಸಿದ ಅವರು, ವಿವಿಧೆಡೆ ಪಾದಚಾರಿ ಮಾರ್ಗ ಮತ್ತು ವೈಟ್ ಟ್ಯಾಪಿಂಗ್ ಕಾಮಗಾರಿ ಪರಿಶೀಲನೆ ಮಾಡಿದರು. ಅಲ್ಲದೆ, ತ್ಯಾಜ್ಯ ಸಾಗಣಿಕೆ ಕೇಂದ್ರಕ್ಕೆ ತೆರಳಿ ಅಭಿವೃದ್ಧಿ ಕೆಲಸಗಳನ್ನು ವೀಕ್ಷಿಸಿದರು.

ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮೂಲ ಸೌಕರ್ಯ ಕಲ್ಪಿಸುವ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈ ಎಲ್ಲಾ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು,” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಚಿವರು ಕಲ್ಯಾಣ ನಗರದಲ್ಲಿ ಆರಂಭವಾದ ಬ್ರ್ಯೂ ಲಾ ಪಾಕ್ಸಿ ಕೆಫೆಯನ್ನು ಉದ್ಘಾಟಿಸಿದರು. ಬಳಿಕ ನಾಗವಾರ ಮುಖ್ಯ ರಸ್ತೆಯ ಉಮರ್ ನಗರದ ಮಸ್ಜಿದ್-ಇ-ಉಮರ್ ಬಿನ್ ಕತ್ತಾಬ್ ನಲ್ಲಿ ನವೀಕರಣಗೊಂಡ ಸ್ಮಶಾನವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ನಾಗವಾರ ಮುಖ್ಯ ರಸ್ತೆ, ಗೋವಿಂದಪುರ ರಸ್ತೆ, ಹೆಣ್ಣೂರು ಮುಖ್ಯ ರಸ್ತೆ, ನೆಹರೂ ರಸ್ತೆಗಳಲ್ಲಿ ಕೈಗೊಂಡಿರುವ ಫುಟ್ ಪಾತ್, ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಅಲ್ಲದೆ, ಎಚ್ ಬಿಆರ್ ಲೇಔಟ್ ನಲ್ಲಿರುವ ತ್ಯಾಜ್ಯ ಸಾಗಣಾ ಕೇಂದ್ರವನ್ನು ವೀಕ್ಷಿಸಿದರು.

ಉಮರ್ ನಗರದ ಮಸ್ಜಿದ್-ಇ-ಉಮರ್ ಬಿನ್ ಕತ್ತಾಬ್ ನಲ್ಲಿ ನವೀಕರಣಗೊಂಡ ಸ್ಮಶಾನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, “ಸರ್ವಜ್ಞನಗರ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಜನರಿದ್ದು, ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಕೊಡಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇನೆ,” ಎಂದು ಹೇಳಿದರು.

“ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಲ್ಲಾ ಸಮುದಾಯಗಳನ್ನು ಒಂದೇ ರೀತಿ ಕಾಣುತ್ತಿದೆ. ಆದರೆ, ಕೆಲವರು ಜಾತಿ, ಧರ್ಮಗಳ ಮಧ್ಯೆ ವೈಷಮ್ಯ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅಂಥವರಿಗೆ ಅವಕಾಶ ಮಾಡಿಕೊಡದೆ ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಕ್ಷೇತ್ರವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ರೂಪಿಸುವುದು ನಮ್ಮ ಉದ್ದೇಶ,” ಎಂದರು.

ಸ್ಥಳೀಯ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಸಚಿವರ ಭೇಟಿ ವೇಳೆ ಆ ಭಾಗದ ನಾಗರಿಕರು ತಮ್ಮ ಪ್ರದೇಶದ ಸಮಸ್ಯೆಗಳನ್ನು ಹೇಳಿಕೊಂಡರಲ್ಲದೆ, ಅವುಗಳನ್ನು ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago