ರಾಜ್ಯ

ನಾವೇನು ಡಿಕೆಶಿ ಆಸ್ತಿ ಬರೆಸಿಕೊಂಡಿಲ್ಲ: ಡಿಸಿಎಂ ವಿರುದ್ಧ ಸಚಿವ ಕೆ.ಎನ್.ರಾಜಣ್ಣ ಬಹಿರಂಗ ಅಸಮಾಧಾನ

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೇಜಾರಾಗಲು ಅವರ ಆಸ್ತಿ ಬರೆಸಿಕೊಂಡಿದ್ದೀವಾ ಎನ್ನುವ ಮೂಲಕ ಸಚಿವ ಕೆ.ಎನ್.ರಾಜಣ್ಣ ಅವರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.

ಡಿನ್ನರ್‌ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್‌ ಪಾರ್ಟಿ ಕ್ಯಾನ್ಸಲ್‌ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ. ಕ್ಯಾನ್ಸಲ್‌ ಇಲ್ಲ. ಈಗಾಗಲೇ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಕೂಡ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಮೊನ್ನೆ ನಡೆದಿರುವ ಡಿನ್ನರ್‌ ಪಾರ್ಟಿ ಬಗ್ಗೆ ಗೊಂದಲ ಆಗಿದೆ. ಆ ಗೊಂದಲದ ಜೊತೆಗೆ ಇನ್ನೊಂದು ಗೊಂದಲ ಆಗೋದು ಬೇಡ. ಅದನ್ನು ಮುಂದೂಡಬೇಕು ಎಂದು ಹೇಳಿತ್ತು. ಅದಕ್ಕೆ ಸಭೆ ಮುಂದೂಡಿಕೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಡಿನ್ನರ್‌ ಮೀಟಿಂಗ್‌ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಮುಂದಿನ ತಿಂಗಳ 14ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತದೆ. ಚಾಮರಾಜನಗರ ಜಿಲ್ಲೆಗೆ ಹೋದರೆ ಸಿಎಂ ಹಾಗೂ ಸಚಿವ ಸ್ಥಾನ ಹೋಗುತ್ತದೆ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವ ಮೊದಲೇ ಡಿನ್ನರ್‌ ಮೀಟಿಂಗ್‌ ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬೇಜಾರಾಗಲು ಅವರ ಆಸ್ತಿಯನ್ನು ಏನಾದರೂ ನಾವೆಲ್ಲಾ ಬರೆಸಿಕೊಂಡಿದ್ದೀವಾ? ಇದೆಲ್ಲಾ ಸುಮ್ಮನೆ ಅಷ್ಟೇ ಎಂದು ಡಿಕೆಶಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

9 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

10 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

10 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

10 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

10 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

10 hours ago