ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೇಜಾರಾಗಲು ಅವರ ಆಸ್ತಿ ಬರೆಸಿಕೊಂಡಿದ್ದೀವಾ ಎನ್ನುವ ಮೂಲಕ ಸಚಿವ ಕೆ.ಎನ್.ರಾಜಣ್ಣ ಅವರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ. ಕ್ಯಾನ್ಸಲ್ ಇಲ್ಲ. ಈಗಾಗಲೇ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಕೂಡ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮೊನ್ನೆ ನಡೆದಿರುವ ಡಿನ್ನರ್ ಪಾರ್ಟಿ ಬಗ್ಗೆ ಗೊಂದಲ ಆಗಿದೆ. ಆ ಗೊಂದಲದ ಜೊತೆಗೆ ಇನ್ನೊಂದು ಗೊಂದಲ ಆಗೋದು ಬೇಡ. ಅದನ್ನು ಮುಂದೂಡಬೇಕು ಎಂದು ಹೇಳಿತ್ತು. ಅದಕ್ಕೆ ಸಭೆ ಮುಂದೂಡಿಕೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಡಿನ್ನರ್ ಮೀಟಿಂಗ್ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಮುಂದಿನ ತಿಂಗಳ 14ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತದೆ. ಚಾಮರಾಜನಗರ ಜಿಲ್ಲೆಗೆ ಹೋದರೆ ಸಿಎಂ ಹಾಗೂ ಸಚಿವ ಸ್ಥಾನ ಹೋಗುತ್ತದೆ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವ ಮೊದಲೇ ಡಿನ್ನರ್ ಮೀಟಿಂಗ್ ಮಾಡುತ್ತೇವೆ ಎಂದು ತಿಳಿಸಿದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೇಜಾರಾಗಲು ಅವರ ಆಸ್ತಿಯನ್ನು ಏನಾದರೂ ನಾವೆಲ್ಲಾ ಬರೆಸಿಕೊಂಡಿದ್ದೀವಾ? ಇದೆಲ್ಲಾ ಸುಮ್ಮನೆ ಅಷ್ಟೇ ಎಂದು ಡಿಕೆಶಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…