ರಾಜ್ಯ

ಅರಣ್ಯಾಧಿಕಾರಿಗಳು ತಿಂಗಳಿಗೊಮ್ಮೆ ಜನಸಂಪರ್ಕ ಸಭೆ ನಡೆಸಲು ಸಚಿವ ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯ ಅಧಿಕಾರಿಗಳು ತಿಂಗಳಿಗೊಮ್ಮೆ ಕಾಡಿನಂಚಿನ ಗ್ರಾಮಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸುವ ಮೂಲಕ ಕುಂದು ಕೊರತೆ ಆಲಿಸಿ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ
ನಡೆದ ರಾಜ್ಯ ವನ್ಯಜೀವಿ ಮಂಡಳಿಯ 3ನೇ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಉಪ ವಲಯ ಅರಣ್ಯಾಧಿಕಾರಿ, ಎ.ಸಿ.ಎಫ್. ಆರ್.ಎಫ್.ಓ. ಮತ್ತು ಸಿಬ್ಬಂದಿ ಜೀವಹಾನಿ, ಬೆಳೆ ಹಾನಿಯಿಂದ ನೊಂದ ಜನರ ಗ್ರಾಮಗಳಿಗೆ ತೆರಳಿ ಪರಿಸ್ಥಿತಿಯ ಖುದ್ದು ಅವಲೋಕನ ಮಾಡಿ, ಸಮಸ್ಯೆ ಆಲಿಸಿ, ಪರಿಹರಿಸಿ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳು ಸಾವಿಗೀಡಾದ ಹಾಗೂ ಅಕ್ರಮ ವಿದ್ಯುತ್ ಸಂಪರ್ಕಿತ ಬೇಲಿಗಳ ಸ್ಪರ್ಶದಿಂದ ಕಾಡಾನೆಗಳು ಮೃತಪಡುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಹಿರಿಯ ಅಧಿಕಾರಿಗಳು ಕಾಡಿನ ಪ್ರತಿ ವಲಯಕ್ಕೆ ತೆರಳಿ, ವಲಯ ಅಧಿಕಾರಿಗಳ, ಗಸ್ತು ಸಿಬ್ಬಂದಿಯ ಕಾರ್ಯವೈಖರಿಯ ಪರಾಮರ್ಶೆ ಮಾಡಿ, ಮುಂಚೂಣಿ ಸಿಬ್ಬಂದಿಯನ್ನು ಹುರಿದುಂಬಿಸಿದರೆ ಇಂತಹ ಘಟನೆಗಳನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟರು.

ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ಹೊಸಪೇಟೆಯಿಂದ ಕ್ಯಾಸಲ್ ರಾಕ್ ವರೆಗೆ ಇರುವ ರೈಲು ಮಾರ್ಗವನ್ನು ಜೋಡಿ ಮಾರ್ಗವಾಗಿ ಪರಿವರ್ತಿಸುವ ಪ್ರಸ್ತಾವನೆ ಕುರಿತಂತೆ ಪರಾಮರ್ಶಿಸಿದ ಅವರು ಯೋಜನೆಯಿಂದ ಜೀವವೈವಿಧ್ಯ, ಪರಿಸರ ಮತ್ತು ವನ್ಯಜೀವಿಗಳ ಮೇಲಾಗುವ ಪರಿಣಾಮಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸೂಚಿಸಿದರು.

ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್. ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಅನುಮತಿ ನೀಡುವ ಕುರಿತಂತೆ ಸಭೆಯಲ್ಲಿ ಪರಾಮರ್ಶಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

4 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

4 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

4 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

4 hours ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

4 hours ago