ರಾಜ್ಯ

ಅರಣ್ಯಾಧಿಕಾರಿಗಳು ತಿಂಗಳಿಗೊಮ್ಮೆ ಜನಸಂಪರ್ಕ ಸಭೆ ನಡೆಸಲು ಸಚಿವ ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯ ಅಧಿಕಾರಿಗಳು ತಿಂಗಳಿಗೊಮ್ಮೆ ಕಾಡಿನಂಚಿನ ಗ್ರಾಮಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸುವ ಮೂಲಕ ಕುಂದು ಕೊರತೆ ಆಲಿಸಿ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ
ನಡೆದ ರಾಜ್ಯ ವನ್ಯಜೀವಿ ಮಂಡಳಿಯ 3ನೇ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಉಪ ವಲಯ ಅರಣ್ಯಾಧಿಕಾರಿ, ಎ.ಸಿ.ಎಫ್. ಆರ್.ಎಫ್.ಓ. ಮತ್ತು ಸಿಬ್ಬಂದಿ ಜೀವಹಾನಿ, ಬೆಳೆ ಹಾನಿಯಿಂದ ನೊಂದ ಜನರ ಗ್ರಾಮಗಳಿಗೆ ತೆರಳಿ ಪರಿಸ್ಥಿತಿಯ ಖುದ್ದು ಅವಲೋಕನ ಮಾಡಿ, ಸಮಸ್ಯೆ ಆಲಿಸಿ, ಪರಿಹರಿಸಿ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳು ಸಾವಿಗೀಡಾದ ಹಾಗೂ ಅಕ್ರಮ ವಿದ್ಯುತ್ ಸಂಪರ್ಕಿತ ಬೇಲಿಗಳ ಸ್ಪರ್ಶದಿಂದ ಕಾಡಾನೆಗಳು ಮೃತಪಡುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಹಿರಿಯ ಅಧಿಕಾರಿಗಳು ಕಾಡಿನ ಪ್ರತಿ ವಲಯಕ್ಕೆ ತೆರಳಿ, ವಲಯ ಅಧಿಕಾರಿಗಳ, ಗಸ್ತು ಸಿಬ್ಬಂದಿಯ ಕಾರ್ಯವೈಖರಿಯ ಪರಾಮರ್ಶೆ ಮಾಡಿ, ಮುಂಚೂಣಿ ಸಿಬ್ಬಂದಿಯನ್ನು ಹುರಿದುಂಬಿಸಿದರೆ ಇಂತಹ ಘಟನೆಗಳನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟರು.

ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ಹೊಸಪೇಟೆಯಿಂದ ಕ್ಯಾಸಲ್ ರಾಕ್ ವರೆಗೆ ಇರುವ ರೈಲು ಮಾರ್ಗವನ್ನು ಜೋಡಿ ಮಾರ್ಗವಾಗಿ ಪರಿವರ್ತಿಸುವ ಪ್ರಸ್ತಾವನೆ ಕುರಿತಂತೆ ಪರಾಮರ್ಶಿಸಿದ ಅವರು ಯೋಜನೆಯಿಂದ ಜೀವವೈವಿಧ್ಯ, ಪರಿಸರ ಮತ್ತು ವನ್ಯಜೀವಿಗಳ ಮೇಲಾಗುವ ಪರಿಣಾಮಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸೂಚಿಸಿದರು.

ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್. ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಅನುಮತಿ ನೀಡುವ ಕುರಿತಂತೆ ಸಭೆಯಲ್ಲಿ ಪರಾಮರ್ಶಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago