ರಾಜ್ಯ

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ ಹಿಡಿಯಲಾಗಿದೆ. ಇನ್ನೂ ಎರಡು ಆನೆಗಳನ್ನು ಸೆರೆ ಹಿಡಿಯಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆ ಖಾಂಡ್ಯ ಹೋಬಳಿಯ ಗ್ರಾಮಸ್ಥರ ನಿಯೋಗವು ಕಾಡಾನೆ ಸೆರೆ, ಕಾಡುಕೋಣ ಮತ್ತು ಕಾಡುಹಂದಿಗಳ ಉಪಟಳ ನಿಯಂತ್ರಿಸುವಂತೆ ಕೋರಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದ ಕೆಲವು ಭಾಗದಲ್ಲಿ ಕಾಡಿನ ಹೊರಗೆ 100ಕ್ಕೂ ಹೆಚ್ಚು ಆನೆಗಳಿದ್ದು, ಅವುಗಳಿಗೆ ಕಾಫಿ ತೋಟ ಯಾವುದು, ಅರಣ್ಯ ಯಾವುದು ಎಂದು ತಿಳಿಯುವುದಿಲ್ಲ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಆನೆಧಾಮ ನಿರ್ಮಿಸಲು 53 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ, ಆನೆ ಕಂದಕ ನಿರ್ವಹಣೆ, ಟೆಂಟಕಲ್ ಫೆನ್ಸಿಂಗ್, ಸೌರ ತಂತಿ ಬೇಲಿ ಅಳವಡಿಕೆ ಮಾಡಲಾಗಿದೆ, ಸಮಗ್ರ ಕಮಾಂಡ್ ಸೆಂಟರ್ ಮಾಡಿ ಸಾರ್ವಜನಿಕರಿಗೆ ವನ್ಯಜೀವಿ ಸಂಚಾರದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. 12 ಕೋಟಿ ರೂ.ವೆಚ್ಚದಲ್ಲಿ ನಿಮ್ಮ ಭಾಗದಲ್ಲಿ ರೈಲ್ವೆ ಹಳಿ ತಡೆಗೋಡೆ ನಿರ್ಮಿಸಲಾಗುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಕಾಡುಕೋಣ, ಕಾಡೆಮ್ಮೆ ನಿಯಂತ್ರಣಕ್ಕೆ ಇಲಾಖೆಯ ಸಿಬ್ಬಂದಿ ತರಬೇತಿ ಪಡೆದು ಬಂದಿದ್ದು, ಕಾಡುಪ್ರಾಣಿಗಳಿಗಾಗಲೀ, ಕಾಡಿನಂಚಿನ ಗ್ರಾಮಸ್ಥರಿಗಾಗಲೀ ತೊಂದರೆ ಆಗದಂತೆ ಹಾಗೂ ಜೀವ, ಜೀವನೋಪಾಯ ಎರಡನ್ನೂ ಉಳಿಸಲು ಪ್ರಕೃತಿ ಪರಿಸರ ರಕ್ಷಣೆಯೊಂದಿಗೆ ಸುಸ್ಥಿರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದರು.

ಕಾಡಿನಂಚಿನ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆ ನಡೆಸುವ ಮೂಲಕ ಗ್ರಾಮಗಳ ಮೂಲಸೌಲಭ್ಯ ಮತ್ತು ಗ್ರಾಮೀಣ ಜನರ ಕೌಶಲ್ಯವರ್ಧನೆಯಂತಹ ಕಾರ್ಯಕ್ರಮಗಳನ್ನೂ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಶೃಂಗೇರಿ ಶಾಸಕ ರಾಜೇಗೌಡ, ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಅಂಶುಮಂತಗೌಡ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago