ಗ್ರಂಥಾಲಯಕ್ಕೆ ಕುವೆಂಪು ಅವರ ಕಾನೂರು ಹೆಗ್ಗಡತಿ ಪುಸ್ತಕ ಉಡುಗೊರೆ ನೀಡಿದ ಸಚಿವರು
ಬೆಳಗಾವಿ : ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.
ಮಲ್ಲವ್ವ ಮೇಟಿ ಅವರ ಕಾರ್ಯ ಇಡೀ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ಮಾದರಿಯಾಗಿದೆ. ಮಲ್ಲವ್ವ ಮೇಟಿ ಕಾರ್ಯನೋಡಿದರೆ ಸಾವಿತ್ರಿಬಾಯಿ ಪುಲೆ ಬಳಿಕ ಆಧುನಿಕ ಅಕ್ಷರದ ಅವ್ವ ಎನ್ನಬಹುದು. ಅವರ ಕಾರ್ಯಕ್ಕೆ ಅಭಿನಂದನೆಗಳು ಎಂದರ.
ಗ್ರಂಥಾಲಯಕ್ಕೆ ‘ಗೃಹಲಕ್ಷ್ಮಿ’ ಹೆಸರಿಡಲು ಮನವಿ
ಮಲ್ಲವ್ವ ಮೇಟಿ ನಿರ್ಮಿಸಿರುವ ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಹೆಸರಿಡಲು ಸಚಿವರು ಮನವಿ ಮಾಡಿದರು. ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದ್ದು, ಈ ಯೋಜನೆಯ ಹೆಸರು ಅಜರಾಮರವಾಗಿರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರು ಕೂಡ ಈ ಯೋಜನೆಯ ಮೂಲಕ ಶಾಶ್ವತವಾಗಿ ಉಳಿಯಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗ್ರಂಥಾಲಯಕ್ಕೆ ‘ಕಾನೂರು ಹೆಗ್ಗಡತಿ’ ಪುಸ್ತಕ ಉಡುಗೊರೆ
ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಕಾನೂರು ಹೆಗ್ಗಡತಿ ಪುಸ್ತಕವನ್ನು ಸಚಿವರು ಗ್ರಂಥಾಲಯಕ್ಕೆ ಉಡುಗೊರೆ ನೀಡಿದರು. ಈ ಗ್ರಂಥಾಲಯ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ ಎಂದು ಸಚಿವರು ಹಾರೈಸಿದರು.
ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…