ಗ್ರಂಥಾಲಯಕ್ಕೆ ಕುವೆಂಪು ಅವರ ಕಾನೂರು ಹೆಗ್ಗಡತಿ ಪುಸ್ತಕ ಉಡುಗೊರೆ ನೀಡಿದ ಸಚಿವರು
ಬೆಳಗಾವಿ : ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.
ಮಲ್ಲವ್ವ ಮೇಟಿ ಅವರ ಕಾರ್ಯ ಇಡೀ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ಮಾದರಿಯಾಗಿದೆ. ಮಲ್ಲವ್ವ ಮೇಟಿ ಕಾರ್ಯನೋಡಿದರೆ ಸಾವಿತ್ರಿಬಾಯಿ ಪುಲೆ ಬಳಿಕ ಆಧುನಿಕ ಅಕ್ಷರದ ಅವ್ವ ಎನ್ನಬಹುದು. ಅವರ ಕಾರ್ಯಕ್ಕೆ ಅಭಿನಂದನೆಗಳು ಎಂದರ.
ಗ್ರಂಥಾಲಯಕ್ಕೆ ‘ಗೃಹಲಕ್ಷ್ಮಿ’ ಹೆಸರಿಡಲು ಮನವಿ
ಮಲ್ಲವ್ವ ಮೇಟಿ ನಿರ್ಮಿಸಿರುವ ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಹೆಸರಿಡಲು ಸಚಿವರು ಮನವಿ ಮಾಡಿದರು. ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದ್ದು, ಈ ಯೋಜನೆಯ ಹೆಸರು ಅಜರಾಮರವಾಗಿರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರು ಕೂಡ ಈ ಯೋಜನೆಯ ಮೂಲಕ ಶಾಶ್ವತವಾಗಿ ಉಳಿಯಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗ್ರಂಥಾಲಯಕ್ಕೆ ‘ಕಾನೂರು ಹೆಗ್ಗಡತಿ’ ಪುಸ್ತಕ ಉಡುಗೊರೆ
ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಕಾನೂರು ಹೆಗ್ಗಡತಿ ಪುಸ್ತಕವನ್ನು ಸಚಿವರು ಗ್ರಂಥಾಲಯಕ್ಕೆ ಉಡುಗೊರೆ ನೀಡಿದರು. ಈ ಗ್ರಂಥಾಲಯ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ ಎಂದು ಸಚಿವರು ಹಾರೈಸಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…