ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾರು ಡ್ರೈವರ್ ಹಿಟ್ ಅಂಡ್ ರನ್ ಕೇಸ್ ದಾಖಲಿಸಿದ್ದಾರೆ.
ಇನ್ನು ಓವರ್ ಟೇಕ್ ಮಾಡುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಯ್ತಾ ಎಂಬ ಪ್ರಶ್ನೆ ಮೂಡಿದ್ದು, ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಬೆಳಿಗ್ಗೆ 5 ಗಂಟೆ ಸಮಯದಲ್ಲಿ ಕಾರು ಅಪಘಾತ ಸಂಭವಿಸಿತ್ತು.
ದೂರಿನಲ್ಲಿ ಉಲ್ಲೇಖಿಸಿರುವ ಅಂಶಗಳು:
ನಾನು ಸಚಿವರ ಸರ್ಕಾರಿ ಕಾರು ಎಂ.01 977ನ್ನು ಚಲಾಯಿಸುತ್ತಿದ್ದೆ. ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಸಚಿವರ ಅಂಗರಕ್ಷಕ ಈರಪ್ಪ ಕುಣಶಿಕಟ್ಟೆ ಇದ್ದರು. ಬೆಂಗಳೂರಿನಿಂದ ಬೆಳಗಾವಿಎ ಹೊರಟ್ಟಿದ್ದೆವು. ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಕ ಧಾರವಾಡ-ಬೆಳಗಾವಿ ಮಧ್ಯದ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಲೈನ್.1ರಲ್ಲಿ ಹೋಗುತ್ತಿದ್ದ ಕಂಟೇನರ್ ಟ್ರಕ್ ಚಾಲಕ ಯಾವುದೇ ಮುನ್ಸೂಚನೆ ಕೊಡದೇ ಎಡಬದಿಗೆ ಬಂದ. ಆ ಎಡಬದಿಗೆ ತೆಗೆದುಕೊಂಡರೂ ಟ್ರಕ್ ಚಾಲಕ ಕಾರಿನ ಬಲ ಬದಿಗೆ ತಾಗಿಸಿದ.
ಕಾರು ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಗಂಭೀರ ಗಾಯಗಳಾಗಿವೆ. ಅಪಘಾತ ಮಾಡಿ ವಾಹನ ನಿಲ್ಲಿಸದೇ ಲಾರಿ ಡ್ರೈವರ್ ಹೋಗಿದ್ದಾನೆ ಎಂದು ದೂರು ದಾಖಲಿಸಲಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…