ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಹಿಟ್ ಅಂಡ್ ರನ್ ಮಾಡಿ ಪರಾರಿಯಾಗಿರುವ ಹೊರ ರಾಜ್ಯದ ಕ್ಯಾಂಟರ್ ವಾಹನಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.
ಪಂಜಾಬ್ ಅಥವಾ ಹರಿಯಾಣದ ಕ್ಯಾಂಟರ್ ಎನ್ನುವ ಪ್ರಾಥಮಿಕ ಮಾಹಿತಿ ಬೆಳಗಾವಿ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದ್ದು, ಪೊಲೀಸರು 60 ಕ್ಯಾಂಟರ್ ವಾಹನಗಳ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೀರೇಬಾಗೇವಾಡಿ ಟೋಲ್ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ವಿಡಿಯೋ ಆಧರಿಸಿ ಪೊಲೀಸರು ಈಗಾಗಲೇ 30 ಕ್ಯಾಂಟರ್ ವಾಹನಗಳನ್ನು ಕರೆಸಿ ವಿಚಾರಣೆ ಮಾಡಿದ್ದಾರೆ.
ಜನವರಿ.14ರ ಮುಂಜಾನೆ ಬೆಂಗಳೂರಿನಿಂದ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ ಹೆಬ್ಬಾಳ್ಕರ್ ಕಾರು ಅಪಘಾತವಾಗಿತ್ತು. ಕಾರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗನ್ ಮ್ಯಾನ್ ಈರಪ್ಪ ಹುಣಶಿಕಟ್ಟಿ ಮತ್ತು ಚಾಲಕ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಕ್ಯಾಂಟರ್ವೊಂದ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಗುಣಮುಖರಾಗಿದ್ದಾರೆ.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…