ನಾವಗೆ ಕಾರ್ಖಾನೆ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದ ಯುವಕ
ಬೆಳಗಾವಿ: ಇತ್ತೀಚೆಗೆ ಸಂಭವಿಸಿದ ನಾವಗೆ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಮೃತಪಟ್ಟ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಕುಟುಂಬಸ್ಥರನ್ನು ಇಂದು ಭೇಟಿ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ ಹೇಳಿದರು.
ಮೃತ ಯುವಕನ ಮನೆಗೆ ಭೇಟಿ ನೀಡಿದ ಸಚಿವರು, ತಂದೆ, ತಾಯಿಯನ್ನು ಸಂತೈಸಿ, ಧೈರ್ಯ ತುಂಬಿದರು. ಇಂಥ ಘಟನೆ ನಡೆದಿರುವುದು ದುರದೃಷ್ಟಕರ, ಈ ಘಟನೆ ನಡೆಯಬಾರದಿತ್ತು. ಮೃತ ಯಲ್ಲಪ್ಪ ಕ್ರಿಯಾಶೀಲ ವ್ಯಕ್ತಿಯಾಗಿದ್ದ, ಯುವಕನ ಕುಟುಂಬದೊಂದಿಗೆ ನಮ್ಮ ಕುಟುಂಬ ಸದಾ ಜೊತೆಗಿರುತ್ತದೆ ಎಂದು ಸಚಿವರು ಹೇಳಿದರು.
ಊಟ ತಿನ್ನಿಸಿದ ಸಚಿವರು
ಮೃತ ಯಲ್ಲಪ್ಪ ಅವರ ತಾಯಿಯ ರೋಧನೆಯನ್ನು ಕಂಡು ಕಣ್ಣೀರು ಹಾಕಿದ ಸಚಿವರು, ಅವರಿಗೆ ಸ್ವತಃ ಊಟ ತಿನ್ನಿಸುವ ಮೂಲಕ ಸಾಂತ್ವನ ಹೇಳಿದರು. ಸಾವು-ನೋವು ಎಲ್ಲವೂ ದೇವರ ಇಚ್ಛೆ, ಇದನ್ನ ತಡೀಯೋಕೆ ಯಾರಿಂದಲೂ ಸಾಧ್ಯವಿಲ್ಲ. ದೈನಂದಿನ ಕಾರ್ಯಗಳಲ್ಲಿ ತೊಡಗಿ ಎಂದು ಧೈರ್ಯ ತುಂಬಿದರು.
ನೀವು ಯಾವುದೇ ಕಾರಣದಿಂದ ಧೈರ್ಯ ಕಳೆದುಕೊಳ್ಳಬಾರದು. ಹೆಣ್ಣು ಮಕ್ಕಳಿಗೆ ಉತ್ತಮ ಭವಿಷ್ಯ ನೀಡಿ. ಅವರನ್ನು ಚೆನ್ನಾಗಿ ಬೆಳೆಸಿ ಎಂದು ಸಚಿವರು ತಂದೆ -ತಾಯಿಯರಲ್ಲಿ ವಿನಂತಿಸಿದರು.
ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…