ನಾವಗೆ ಕಾರ್ಖಾನೆ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದ ಯುವಕ
ಬೆಳಗಾವಿ: ಇತ್ತೀಚೆಗೆ ಸಂಭವಿಸಿದ ನಾವಗೆ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಮೃತಪಟ್ಟ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಕುಟುಂಬಸ್ಥರನ್ನು ಇಂದು ಭೇಟಿ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ ಹೇಳಿದರು.
ಮೃತ ಯುವಕನ ಮನೆಗೆ ಭೇಟಿ ನೀಡಿದ ಸಚಿವರು, ತಂದೆ, ತಾಯಿಯನ್ನು ಸಂತೈಸಿ, ಧೈರ್ಯ ತುಂಬಿದರು. ಇಂಥ ಘಟನೆ ನಡೆದಿರುವುದು ದುರದೃಷ್ಟಕರ, ಈ ಘಟನೆ ನಡೆಯಬಾರದಿತ್ತು. ಮೃತ ಯಲ್ಲಪ್ಪ ಕ್ರಿಯಾಶೀಲ ವ್ಯಕ್ತಿಯಾಗಿದ್ದ, ಯುವಕನ ಕುಟುಂಬದೊಂದಿಗೆ ನಮ್ಮ ಕುಟುಂಬ ಸದಾ ಜೊತೆಗಿರುತ್ತದೆ ಎಂದು ಸಚಿವರು ಹೇಳಿದರು.
ಊಟ ತಿನ್ನಿಸಿದ ಸಚಿವರು
ಮೃತ ಯಲ್ಲಪ್ಪ ಅವರ ತಾಯಿಯ ರೋಧನೆಯನ್ನು ಕಂಡು ಕಣ್ಣೀರು ಹಾಕಿದ ಸಚಿವರು, ಅವರಿಗೆ ಸ್ವತಃ ಊಟ ತಿನ್ನಿಸುವ ಮೂಲಕ ಸಾಂತ್ವನ ಹೇಳಿದರು. ಸಾವು-ನೋವು ಎಲ್ಲವೂ ದೇವರ ಇಚ್ಛೆ, ಇದನ್ನ ತಡೀಯೋಕೆ ಯಾರಿಂದಲೂ ಸಾಧ್ಯವಿಲ್ಲ. ದೈನಂದಿನ ಕಾರ್ಯಗಳಲ್ಲಿ ತೊಡಗಿ ಎಂದು ಧೈರ್ಯ ತುಂಬಿದರು.
ನೀವು ಯಾವುದೇ ಕಾರಣದಿಂದ ಧೈರ್ಯ ಕಳೆದುಕೊಳ್ಳಬಾರದು. ಹೆಣ್ಣು ಮಕ್ಕಳಿಗೆ ಉತ್ತಮ ಭವಿಷ್ಯ ನೀಡಿ. ಅವರನ್ನು ಚೆನ್ನಾಗಿ ಬೆಳೆಸಿ ಎಂದು ಸಚಿವರು ತಂದೆ -ತಾಯಿಯರಲ್ಲಿ ವಿನಂತಿಸಿದರು.
ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…