ನಾವಗೆ ಕಾರ್ಖಾನೆ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದ ಯುವಕ
ಬೆಳಗಾವಿ: ಇತ್ತೀಚೆಗೆ ಸಂಭವಿಸಿದ ನಾವಗೆ ಕಾರ್ಖಾನೆಯ ಬೆಂಕಿ ಅವಘಡದಲ್ಲಿ ಮೃತಪಟ್ಟ ಮಾರ್ಕಂಡೇಯ ನಗರದ ಯುವಕ ಯಲ್ಲಪ್ಪ ಗುಂಡ್ಯಾಗೋಳ ಕುಟುಂಬಸ್ಥರನ್ನು ಇಂದು ಭೇಟಿ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ ಹೇಳಿದರು.
ಮೃತ ಯುವಕನ ಮನೆಗೆ ಭೇಟಿ ನೀಡಿದ ಸಚಿವರು, ತಂದೆ, ತಾಯಿಯನ್ನು ಸಂತೈಸಿ, ಧೈರ್ಯ ತುಂಬಿದರು. ಇಂಥ ಘಟನೆ ನಡೆದಿರುವುದು ದುರದೃಷ್ಟಕರ, ಈ ಘಟನೆ ನಡೆಯಬಾರದಿತ್ತು. ಮೃತ ಯಲ್ಲಪ್ಪ ಕ್ರಿಯಾಶೀಲ ವ್ಯಕ್ತಿಯಾಗಿದ್ದ, ಯುವಕನ ಕುಟುಂಬದೊಂದಿಗೆ ನಮ್ಮ ಕುಟುಂಬ ಸದಾ ಜೊತೆಗಿರುತ್ತದೆ ಎಂದು ಸಚಿವರು ಹೇಳಿದರು.
ಊಟ ತಿನ್ನಿಸಿದ ಸಚಿವರು
ಮೃತ ಯಲ್ಲಪ್ಪ ಅವರ ತಾಯಿಯ ರೋಧನೆಯನ್ನು ಕಂಡು ಕಣ್ಣೀರು ಹಾಕಿದ ಸಚಿವರು, ಅವರಿಗೆ ಸ್ವತಃ ಊಟ ತಿನ್ನಿಸುವ ಮೂಲಕ ಸಾಂತ್ವನ ಹೇಳಿದರು. ಸಾವು-ನೋವು ಎಲ್ಲವೂ ದೇವರ ಇಚ್ಛೆ, ಇದನ್ನ ತಡೀಯೋಕೆ ಯಾರಿಂದಲೂ ಸಾಧ್ಯವಿಲ್ಲ. ದೈನಂದಿನ ಕಾರ್ಯಗಳಲ್ಲಿ ತೊಡಗಿ ಎಂದು ಧೈರ್ಯ ತುಂಬಿದರು.
ನೀವು ಯಾವುದೇ ಕಾರಣದಿಂದ ಧೈರ್ಯ ಕಳೆದುಕೊಳ್ಳಬಾರದು. ಹೆಣ್ಣು ಮಕ್ಕಳಿಗೆ ಉತ್ತಮ ಭವಿಷ್ಯ ನೀಡಿ. ಅವರನ್ನು ಚೆನ್ನಾಗಿ ಬೆಳೆಸಿ ಎಂದು ಸಚಿವರು ತಂದೆ -ತಾಯಿಯರಲ್ಲಿ ವಿನಂತಿಸಿದರು.
ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…