ರಾಜ್ಯ

ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಬಾಲಭವನದ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬಾಲಭವನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಬಾಲಭವನದ ಕಾರ್ಯಕ್ರಮಗಳು ಇಲಾಖೆಯ ಮಕ್ಕಳ ಯಶಸ್ವಿ ಕಾರ್ಯಕ್ರಮಗಳಾಗಿದ್ದು, ಹಾಗಾಗಿ ಸರ್ಕಾರ ಮಕ್ಕಳಿಗಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಬೇಕೆಂದು ಸೂಚಿಸಿದರು.

ಇದೇ ವೇಳೆ ಬಾಲ ಭವನ ಅಧ್ಯಕ್ಞ ಬಿ.ಆರ್.‌ ನಾಯ್ಡು ಮಾತನಾಡಿ, ಬಾಲಭವನದ ಕಾರ್ಯಕ್ರಮಗಳು ಕೊರೊನಾ ಕಾಲಾವಧಿಯಿಂದ ಸ್ಥಗಿತಗೊಂಡಿದ್ದವು. ಬಾಲಭವನ ಬೆಳೆವಣಿಗೆಗೆ ಹಾಗೂ ಮಕ್ಕಳ ಸರ್ವತೋಮುಖ ಬೆಳೆವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಯೋಜಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೋಗಿಲು ಲೇಔಟ್‌ನಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ: ಸಚಿವ ಪರಮೇಶ್ವರ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ…

41 mins ago

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನ

ಡಾಕಾ: ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಇಂದು ಬೆಳಿಗ್ಗೆ ಡಾಕಾದ ಎವರ್‌ಕೇರ್‌…

1 hour ago

ಮೈಸೂರಿನಲ್ಲಿ ವೈಕುಂಠ ಏಕಾದಶಿ ಸಂಭ್ರಮ: ದೇಗುಲಗಳಲ್ಲಿ ಭಕ್ತಸಾಗರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವೈಕುಂಠ ಏಕಾದಶಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಶ್ರೀ ಲಕ್ಷ್ಮೀವೆಂಟಕರಮಣಸ್ವಾಮಿ ದೇವಾಲಯವು ಇಂದು…

1 hour ago

ಹೊಸ ವರ್ಷಾಚರಣೆ: ರಾಜ್ಯದೆಲ್ಲೆಡೆ ತುರ್ತು ಚಿಕಿತ್ಸಾ ಸೇವೆಗೆ ಸಿದ್ಧತೆ

ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ರಾಜ್ಯದ ವಿವಿಧೆಡೆ ಸಾರ್ವಜನಿಕರು ಅಸ್ವಸ್ಥರಾಗುವ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ…

2 hours ago

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನ: ವಿಜಯೇಂದ್ರ ವಾಗ್ದಾಳಿ

ಬೆಳಗಾವಿ: ನಿಯಮಗಳನ್ನು ಗಾಳಿಗೆ ತೂರಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕಲ್ಪಿಸಿಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು…

2 hours ago

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…

3 hours ago