ಗೃಹಕಚೇರಿಯಲ್ಲಿ ಆದೇಶ ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಆಯ್ಕೆ ಸಂಪೂರ್ಣ ಪಾರದರ್ಶಕವಾಗಿದೆ: ಸಚಿವೆ
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ಬೆಳಗಾವಿಯ ಗೃಹ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ನೂತನವಾಗಿ ನೇಮಕಗೊಂಡಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ನೇಮಕಾತಿಯ ಆದೇಶ ಪತ್ರಗಳನ್ನು ವಿತರಿಸಿದರು.
ಜೊತೆಗೆ ಸಹಾಯಕಿ ಹುದ್ದೆಯಿಂದ ಕಾರ್ಯಕರ್ತೆ ಹುದ್ದೆಗೆ ಪದೋನ್ನತಿ ಹೊಂದಿದ ಹಾಗೂ ಅನುಕಂಪ ಆಧಾರದ ಮೇಲೆ ಆಯ್ಕೆಗೊಂಡವರಿಗೂ ಆದೇಶ ಪತ್ರಗಳನ್ನು ವಿತರಿಸಿ, ಶುಭ ಕೋರಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ ನೇಮಕದಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲಾಗಿದೆ. ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾದೆ, ಅರ್ಹರಿಗಷ್ಟೇ ನೌಕರಿ ನೀಡಲಾಗಿದ್ದು, ನನ್ನ ಬೆಳಗಾವಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ 35 ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಅದೇಶ ಪತ್ರ ನೀಡಲಾಗಿದ್ದು, ಅನುಕಂಪದ ಆಧಾರದ ಮೇಲೆ 3 ಮಂದಿಗೆ ನೌಕರಿ ನೀಡಲಾಗಿದೆ ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಾಂಟೆಸ್ಸರಿ ಶೀಘ್ರವೇ ರಾಜ್ಯಾದ್ಯಂತ ವಿಸ್ತರಗೊಳ್ಳಲಿದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳು ಅನುದಾನ ನೀಡಲಿದ್ದು, ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ ಕೂಡ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಈ ವೇಳೆ ಜಿಲ್ಲೆಯ ಉಪ ನಿರ್ದೇಶಕರಾದ ನಾಗರಾಜ್, ಸಿಡಿಪಿಓ ಸುಮಿತ್ರಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…