ವಿಜಯಪುರ: ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಮುರುಗೇಶ್ ನಿರಾಣಿ ವಿರುದ್ಧ ಕಿಡಿಕಾರಿದ್ದಾರೆ.
ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಸಚಿವ ಎಂ.ಬಿ.ಪಾಟೀಲ್ ಅವರು, ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಇಂದು ಮತ್ತು ಮುಂದೆಯೂ ಬಿಡಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದ್ನು ನೆನಪಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಮಾಜಿ ಸಚಿವ ಮುರುಗೇಶ್ ನಿರಾಣಿಗೆ ನಾನು ದನ ಕಾಯುವವನು ಎಂಬ ಶಬ್ಧವನ್ನು ಎಲ್ಲಿಯೂ ಬಳಸಿಲ್ಲ. ಏಕವಚನದಲ್ಲೂ ನಾನು ಮಾತನಾಡಿಲ್ಲ. ಅಷ್ಟಕ್ಕೂ ದನ ಕಾಯುವುದು ಗೌರವದ ಕೆಲಸ. ದನಕಾಯುವವರನ್ನು ನಾನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…